‘ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನಗೇನೂ ತಿಳಿದಿಲ್ಲ’ ಎಂದು ಹೇಳಿದ ಅವರು, ‘ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ ಎಂದು ಸಹೋದರ, ಶಾಸಕ ರಮೇಶ ಜಾರಕಿಹೊಳಿ ನೀಡಿದ್ದ ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ’ ಎಂದರು. ಬಜೆಟ್ ಮಂಡಿಸಿದ ನಂತರ ನಿಗಮ– ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶಾಸಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಆ ನಂತರ ಕಾರ್ಯಕರ್ತರಿಗೆ ನೀಡಲಾಗುವುದು. ನಮ್ಮ ಕಡೆಯ ಆಕಾಂಕ್ಷಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ನೀಡಲಾಗಿದೆ ಎಂದು ಹೇಳಿದರು.