ಕಚೇರಿಯನ್ನು ದಿಢೀರ್ ಸ್ಥಳಾಂತರಿಸಿದ್ದ ನಿರ್ಧಾರದ ವಿರುದ್ಧ ಇಲ್ಲಿನ ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮೇ 15ರಂದೇ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿ ವಿಷಯದ ಕುರಿತು ಗಮನಸೆಳೆದಿದ್ದರು. ಬುಧವಾರ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೂ ಮನವರಿಕೆ ಮಾಡಿಕೊಟ್ಟು, ಹುದ್ದೆ ಸ್ಥಳಾಂತರ ಆದೇಶ ರದ್ದುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.