‘ಸದಸ್ಯರಿಲ್ಲದಿರುವುದರಿಂದ ಪಿಡಿಒಗಳು ತಮಗೆ ಬೇಕಾದ ರೀತಿಯಲ್ಲಿ ಲಂಚ ಪಡೆದುಕೊಂಡು ವಸತಿ ಮನೆಗಳು, ಪ್ರವಾಹ ಹಾನಿಯಾಗಿರುವ ಮನೆಗಳ ಪಟ್ಟಿ ಸಿದ್ಧಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಹೇಳುವವರು, ಕೇಳುವವರು ಯಾರೂ ಇಲ್ಲವೆಂದು ಭಾವಿಸಿದಂತಿದೆ. ಹೀಗಾಗಿ, ಪಿಡಿಒಗಳು ತಾಲ್ಲೂಕು ಪಂಚಾಯಿತಿ ಸದಸ್ಯರ ಸಲಹೆ–ಸೂಚನೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಒ ಗಮನಹರಿಸಬೇಕು’ ಎಂದು ತಿಳಿಸಿದರು.