<p><strong>ಬೆಳಗಾವಿ:</strong> ‘ಅಧಿಕಾರದ ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಕಾಮಗಾರಿ ತೆಗೆದುಕೊಳ್ಳುವ ಮುನ್ನ ತಾಲ್ಲೂಕು ಪಂಚಾಯಿತಿ ಸದಸ್ಯರ ಗಮನಕ್ಕೆ ತರಬೇಕು’ ಎಂದು ಅಧ್ಯಕ್ಷ ಶಂಕರಗೌಡ ಪಾಟೀಲ ಸೂಚಿಸಿದರು.</p>.<p>ಇಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸದಸ್ಯರಿಲ್ಲದಿರುವುದರಿಂದ ಪಿಡಿಒಗಳು ತಮಗೆ ಬೇಕಾದ ರೀತಿಯಲ್ಲಿ ಲಂಚ ಪಡೆದುಕೊಂಡು ವಸತಿ ಮನೆಗಳು, ಪ್ರವಾಹ ಹಾನಿಯಾಗಿರುವ ಮನೆಗಳ ಪಟ್ಟಿ ಸಿದ್ಧಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಹೇಳುವವರು, ಕೇಳುವವರು ಯಾರೂ ಇಲ್ಲವೆಂದು ಭಾವಿಸಿದಂತಿದೆ. ಹೀಗಾಗಿ, ಪಿಡಿಒಗಳು ತಾಲ್ಲೂಕು ಪಂಚಾಯಿತಿ ಸದಸ್ಯರ ಸಲಹೆ–ಸೂಚನೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಒ ಗಮನಹರಿಸಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಯಲ್ಲಪ್ಪ ಕೋಳೆಕರ, ‘ಪ್ರತಿ ಪಂಚಾಯಿತಿಗೆ ₹ 70-80 ಲಕ್ಷ ಅನುದಾನ ಬಿಡುಗಡೆಯಾಗುತ್ತಿದೆ. ಇದರಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯರ ಗಮನಕ್ಕೆ ತಾರದೆ ಕಾಮಗಾರಿ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಸದಸ್ಯರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಳಪೆ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಪ್ರಶ್ನಿಸಿದರೆ, ಅದೇನು ಮಾಡಿಕೊಳ್ಳುತ್ತಿರೋ ಮಾಡಿಕೊಳ್ಳಿ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ದೂರಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಸುನೀಲ ಅಷ್ಟೇಕರ, ‘ಸುಳೇಬಾವಿ ಗ್ರಾಮದೇವತೆ ದೇವಸ್ಥಾನ ಸಂಪರ್ಕ ರಸ್ತೆ ಸುಧಾರಣೆ ಮಾಡುವಂತೆ ಅನೇಕ ಬಾರಿ ಪಿಡಿಒಗೆ ತಿಳಿಸಿದ್ದೇನೆ. ಆದರೂ ಕೆಲಸ ಆಗಿಲ್ಲ. ತಾ.ಪಂ. ಒ ಮತ್ತು ಆಡಳಿತಾಧಿಕಾರಿಗೆ ಹೇಳಿದರೂ ಸ್ಪಂದಿಸಿಲ್ಲ. ಇನ್ನೆರಡು ದಿನದಲ್ಲಿ ರಸ್ತೆ ಸುಧಾರಣೆ ಆಗದಿದ್ದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಗ್ರಾಮಸ್ಥರೆಲ್ಲರೂ ಸೇರಿ ಕಟ್ಟಿ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ಉಪಾಧ್ಯಕ್ಷ ಮಾರುತಿ ಸನದಿ, ಇಒ ಮಲ್ಲಿಕಾರ್ಜುನ ಕಲಾದಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಅಧಿಕಾರದ ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಕಾಮಗಾರಿ ತೆಗೆದುಕೊಳ್ಳುವ ಮುನ್ನ ತಾಲ್ಲೂಕು ಪಂಚಾಯಿತಿ ಸದಸ್ಯರ ಗಮನಕ್ಕೆ ತರಬೇಕು’ ಎಂದು ಅಧ್ಯಕ್ಷ ಶಂಕರಗೌಡ ಪಾಟೀಲ ಸೂಚಿಸಿದರು.</p>.<p>ಇಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸದಸ್ಯರಿಲ್ಲದಿರುವುದರಿಂದ ಪಿಡಿಒಗಳು ತಮಗೆ ಬೇಕಾದ ರೀತಿಯಲ್ಲಿ ಲಂಚ ಪಡೆದುಕೊಂಡು ವಸತಿ ಮನೆಗಳು, ಪ್ರವಾಹ ಹಾನಿಯಾಗಿರುವ ಮನೆಗಳ ಪಟ್ಟಿ ಸಿದ್ಧಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಹೇಳುವವರು, ಕೇಳುವವರು ಯಾರೂ ಇಲ್ಲವೆಂದು ಭಾವಿಸಿದಂತಿದೆ. ಹೀಗಾಗಿ, ಪಿಡಿಒಗಳು ತಾಲ್ಲೂಕು ಪಂಚಾಯಿತಿ ಸದಸ್ಯರ ಸಲಹೆ–ಸೂಚನೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಒ ಗಮನಹರಿಸಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಯಲ್ಲಪ್ಪ ಕೋಳೆಕರ, ‘ಪ್ರತಿ ಪಂಚಾಯಿತಿಗೆ ₹ 70-80 ಲಕ್ಷ ಅನುದಾನ ಬಿಡುಗಡೆಯಾಗುತ್ತಿದೆ. ಇದರಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯರ ಗಮನಕ್ಕೆ ತಾರದೆ ಕಾಮಗಾರಿ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಸದಸ್ಯರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಳಪೆ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಪ್ರಶ್ನಿಸಿದರೆ, ಅದೇನು ಮಾಡಿಕೊಳ್ಳುತ್ತಿರೋ ಮಾಡಿಕೊಳ್ಳಿ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ದೂರಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಸುನೀಲ ಅಷ್ಟೇಕರ, ‘ಸುಳೇಬಾವಿ ಗ್ರಾಮದೇವತೆ ದೇವಸ್ಥಾನ ಸಂಪರ್ಕ ರಸ್ತೆ ಸುಧಾರಣೆ ಮಾಡುವಂತೆ ಅನೇಕ ಬಾರಿ ಪಿಡಿಒಗೆ ತಿಳಿಸಿದ್ದೇನೆ. ಆದರೂ ಕೆಲಸ ಆಗಿಲ್ಲ. ತಾ.ಪಂ. ಒ ಮತ್ತು ಆಡಳಿತಾಧಿಕಾರಿಗೆ ಹೇಳಿದರೂ ಸ್ಪಂದಿಸಿಲ್ಲ. ಇನ್ನೆರಡು ದಿನದಲ್ಲಿ ರಸ್ತೆ ಸುಧಾರಣೆ ಆಗದಿದ್ದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಗ್ರಾಮಸ್ಥರೆಲ್ಲರೂ ಸೇರಿ ಕಟ್ಟಿ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ಉಪಾಧ್ಯಕ್ಷ ಮಾರುತಿ ಸನದಿ, ಇಒ ಮಲ್ಲಿಕಾರ್ಜುನ ಕಲಾದಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>