<p>ಚಚಡಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ದೇಸಗತಿ ಮನೆತನದ ವಂಶಸ್ಥರಾದ ಅವಿನಾಶ್ ನಾಗರಾಜ ದೇಸಾಯಿ ಅವರು ಮಂಡಿಸಿದ ಕ್ರಿಯಾತ್ಮಕ ಚಟುವಟಿಕೆಯು, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ. ₹8.2 ಲಕ್ಷ ಮೌಲ್ಯದ ಮ್ಯಾಸ್ಸಿ ಫರ್ಗ್ಯುಸನ್ ಟ್ರ್ಯಾಕ್ಟರ್ ಅನ್ನು ಅವರಿಗೆ ಬಹುಮಾನವಾಗಿ ನೀಡಲಾಗಿದೆ.</p>.<p>ಎಂಜಿನಿಯರ್ ಆಗಿರುವ ಅವಿನಾಶ್ ಅವರು ಗ್ರಾಮದಲ್ಲಿಯೇ ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಟಿಎಎಫ್ಇ ಕಂಪನಿಯು ‘ಕೃಷಿಯಲ್ಲಿ ತಂತ್ರಜ್ಞಾನ ಬಳಕೆ’ ವಿಷಯದ ಕುರಿತು ಆಯೋಜಿಸಿದ್ದ ಸ್ಪರ್ಧೆಯಲ್ಲಿ ತಮ್ಮದೇ ನವೀನ ಯೋಜನೆ ರೂಪಿಸಿ ಸಲ್ಲಿಸಿದ್ದರು. </p>.<p>ಹೊಸ ತಲೆಮಾರಿನ ಟ್ರ್ಯಾಕ್ಟರ್ಗಳನ್ನು ಬಳಸಿ ವಿನೂತನ ಪ್ರಯೋಗ ಮಾಡಿದ್ದು ಅವರ ಸಾಧನೆ. ಕೃಷಿಯಲ್ಲಿ ಟ್ರ್ಯಾಕ್ಟರ್ಅನ್ನು ಹೇಗೆಲ್ಲ ಬಳಸಬಹುದು, ಏನೇನು ಪ್ರಯೋಜನ ಪಡೆಯಬಹುದು ಎಂಬ ಬಗ್ಗೆ ಅವರು ತೋರಿಸಿಕೊಟ್ಟ ಪರಿಕಲ್ಪನೆಗೆ ಈ ಬಹುಮಾನ ನೀಡಲಾಗಿದೆ.</p>.<p>ವಿದ್ಯಾರ್ಥಿಗಳಿಗೆ ಕೃಷಿ ಅರಿವು: ಕೃಷಿ ಇಲಾಖೆ, ಮತ್ತಿಕೊಪ್ಪದ ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸರ್ದಾರ್ ವಿ.ಜಿ. ದೇಸಾಯಿ ಪ್ರೌಢಶಾಲೆಯ ಆಶ್ರಯದಲ್ಲಿ ಈಚೆಗೆ ಶಾಲೆ ಮಕ್ಕಳಿಗಾಗಿ ‘ನಮ್ಮ ನಿಮ್ಮೆಲ್ಲರ ಚಿತ್ತ ಕೃಷಿಯತ್ತ’ ಎಂಬ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.</p>.<p>ಅವಿನಾಶ್ ಅವರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗೆದ್ದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಯಿತು.</p>.<p>ಜಂಟಿ ಕೃಷಿ ನಿರ್ದೇಶಕ ಎಚ್.ಡಿ.ಕೋಳೇಕರ ಕಾರ್ಯಕ್ರಮ ಉದ್ಘಾಟಿಸಿದರು. ದೇಸಗತಿ ಮನೆತನದ ವಂಶಸ್ಥರಾದ ನಾಗರಾಜ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಸವದತ್ತಿಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ, ಕೆವಿಕೆ ಬೇಸಾಯ ಶಾಸ್ತ್ರಜ್ಞ ಜಿ.ಬಿ.ವಿಶ್ವನಾಥ, ಮುಖಂಡರಾದ ಗುಣಪ್ಪ ದೇಸಾಯಿ ಮುಂತಾದವರು ಅತಿಥಿಗಳಾಗಿ ಪಾಲ್ಗೊಂಡರು.</p>.<p>ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗಾಗಿ ಕೃಷಿ ಆಧರಿತ ರಸಪ್ರಶ್ನೆ ಹಾಗೂ ಚರ್ಚಾ ಸ್ಪರ್ಧೆ ಏರ್ಪಡಿಸಿ, ಎಸ್ವಿಜಿಡಿ ಫೌಂಡೇಷನ್ ವತಿಯಿಂದ ಬಹುಮಾನ ಕೂಡ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಚಡಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ದೇಸಗತಿ ಮನೆತನದ ವಂಶಸ್ಥರಾದ ಅವಿನಾಶ್ ನಾಗರಾಜ ದೇಸಾಯಿ ಅವರು ಮಂಡಿಸಿದ ಕ್ರಿಯಾತ್ಮಕ ಚಟುವಟಿಕೆಯು, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ. ₹8.2 ಲಕ್ಷ ಮೌಲ್ಯದ ಮ್ಯಾಸ್ಸಿ ಫರ್ಗ್ಯುಸನ್ ಟ್ರ್ಯಾಕ್ಟರ್ ಅನ್ನು ಅವರಿಗೆ ಬಹುಮಾನವಾಗಿ ನೀಡಲಾಗಿದೆ.</p>.<p>ಎಂಜಿನಿಯರ್ ಆಗಿರುವ ಅವಿನಾಶ್ ಅವರು ಗ್ರಾಮದಲ್ಲಿಯೇ ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಟಿಎಎಫ್ಇ ಕಂಪನಿಯು ‘ಕೃಷಿಯಲ್ಲಿ ತಂತ್ರಜ್ಞಾನ ಬಳಕೆ’ ವಿಷಯದ ಕುರಿತು ಆಯೋಜಿಸಿದ್ದ ಸ್ಪರ್ಧೆಯಲ್ಲಿ ತಮ್ಮದೇ ನವೀನ ಯೋಜನೆ ರೂಪಿಸಿ ಸಲ್ಲಿಸಿದ್ದರು. </p>.<p>ಹೊಸ ತಲೆಮಾರಿನ ಟ್ರ್ಯಾಕ್ಟರ್ಗಳನ್ನು ಬಳಸಿ ವಿನೂತನ ಪ್ರಯೋಗ ಮಾಡಿದ್ದು ಅವರ ಸಾಧನೆ. ಕೃಷಿಯಲ್ಲಿ ಟ್ರ್ಯಾಕ್ಟರ್ಅನ್ನು ಹೇಗೆಲ್ಲ ಬಳಸಬಹುದು, ಏನೇನು ಪ್ರಯೋಜನ ಪಡೆಯಬಹುದು ಎಂಬ ಬಗ್ಗೆ ಅವರು ತೋರಿಸಿಕೊಟ್ಟ ಪರಿಕಲ್ಪನೆಗೆ ಈ ಬಹುಮಾನ ನೀಡಲಾಗಿದೆ.</p>.<p>ವಿದ್ಯಾರ್ಥಿಗಳಿಗೆ ಕೃಷಿ ಅರಿವು: ಕೃಷಿ ಇಲಾಖೆ, ಮತ್ತಿಕೊಪ್ಪದ ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸರ್ದಾರ್ ವಿ.ಜಿ. ದೇಸಾಯಿ ಪ್ರೌಢಶಾಲೆಯ ಆಶ್ರಯದಲ್ಲಿ ಈಚೆಗೆ ಶಾಲೆ ಮಕ್ಕಳಿಗಾಗಿ ‘ನಮ್ಮ ನಿಮ್ಮೆಲ್ಲರ ಚಿತ್ತ ಕೃಷಿಯತ್ತ’ ಎಂಬ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.</p>.<p>ಅವಿನಾಶ್ ಅವರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗೆದ್ದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಯಿತು.</p>.<p>ಜಂಟಿ ಕೃಷಿ ನಿರ್ದೇಶಕ ಎಚ್.ಡಿ.ಕೋಳೇಕರ ಕಾರ್ಯಕ್ರಮ ಉದ್ಘಾಟಿಸಿದರು. ದೇಸಗತಿ ಮನೆತನದ ವಂಶಸ್ಥರಾದ ನಾಗರಾಜ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಸವದತ್ತಿಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ, ಕೆವಿಕೆ ಬೇಸಾಯ ಶಾಸ್ತ್ರಜ್ಞ ಜಿ.ಬಿ.ವಿಶ್ವನಾಥ, ಮುಖಂಡರಾದ ಗುಣಪ್ಪ ದೇಸಾಯಿ ಮುಂತಾದವರು ಅತಿಥಿಗಳಾಗಿ ಪಾಲ್ಗೊಂಡರು.</p>.<p>ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗಾಗಿ ಕೃಷಿ ಆಧರಿತ ರಸಪ್ರಶ್ನೆ ಹಾಗೂ ಚರ್ಚಾ ಸ್ಪರ್ಧೆ ಏರ್ಪಡಿಸಿ, ಎಸ್ವಿಜಿಡಿ ಫೌಂಡೇಷನ್ ವತಿಯಿಂದ ಬಹುಮಾನ ಕೂಡ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>