ಪರ್ಯಾಯ ಮಾರ್ಗ ಬಳಸಲು ಮನವಿ: ‘ಮಹಾಲಕ್ಷ್ಮಿ ದೇವಿ ಜಾತ್ರೆ ಪ್ರಯುಕ್ತ, ಸಾಂಬ್ರಾದಲ್ಲಿ ಜನದಟ್ಟಣೆ ಹೆಚ್ಚಿದೆ. ಹಾಗಾಗಿ ಮೇ 19ರಿಂದ 21ರವರೆಗೆ ಸುಗಮ ಸಂಚಾರಕ್ಕಾಗಿ ಜನರು ಪರ್ಯಾಯ ಮಾರ್ಗ ಬಳಸಿ ಸಂಚರಿಸಬೇಕು. ಬೆಳಗಾವಿಯಿಂದ ಸಾಂಬ್ರಾ ವಿಮಾನ ನಿಲ್ದಾಣ ಹಾಗೂ ಬಾಗಲಕೋಟೆಗೆ ಹೋಗುವವರು ಕಣಬರ್ಗಿ, ಖನಗಾವಿ ಕ್ರಾಸ್, ಸುಳೇಬಾವಿ, ಮಾರಿಹಾಳ ಮಾರ್ಗವಾಗಿ ಸಾಗಬೇಕು. ವಿಮಾನ ನಿಲ್ದಾಣ ಮತ್ತು ಬಾಗಲಕೋಟೆಯಿಂದ ಬೆಳಗಾವಿ ನಗರಕ್ಕೆ ಬರುವವರು ಇದೇ ಮಾರ್ಗದಲ್ಲಿ ಸಂಚರಿಸಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.