<p><strong>ಅಥಣಿ:</strong> ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಾಗೂ ಶೈಕ್ಷಣಿಕ ಕಾರ್ಯಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುವಂತಾಗಲು ಎಸ್.ಡಿ.ಎಂ.ಸಿ. ಸದಸ್ಯರ ಕೊಡುಗೆ ಅಪಾರವಾಗಿದೆ. ಶಿಕ್ಷಕರೊಂದಿಗೆ ಸಮಾಲೋಚಿಸಿ ನಡೆಸಿ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಿದರೆ ಶಾಲೆಗಳು ಮಾದರಿಯಾಗುತ್ತವೆ’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಜಡೆಪ್ಪ ಕುಂಬಾರ ಹೇಳಿದರು.</p>.<p>ಸಮೀಪದ ಸತ್ತಿ ಗ್ರಾಮದ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಬಿಇಒ ಕಚೇರಿ ಹಾಗೂ ವಲಯ ಸಮೂಹ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಿದ್ದ ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಮುಖ್ಯಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ವಿಠಲ ತಟ್ರಿ, ಅಣ್ಣಪ್ಪ ರುದ್ರಗೌಡರ, ವಲಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ.ಎಚ್. ಜುಲಪಿ, ಆರ್.ಕೆ. ಹಳ್ಳೋಳ್ಳಿ, ಸುನೀಲ ಸನದಿ, ಎ.ಆರ್. ಹುಣಸಿಕಟ್ಟಿ, ಇಲಾಯಿ ಮೀರಾಬಾಯಿ, ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಚಿದಾನಂದ ಪಾಟೀಲ ಇದ್ದರು.</p>.<p>ವಿವಿಧ 12 ಶಾಲೆಗಳ ಎಸ್ಡಿಎಂಸಿ ಸದಸ್ಯರು ಶಿಬಿರದಲ್ಲಿ ಭಾಗವಹಿಸಿದ್ದರು.</p>.<p>ಶಿಕ್ಷಕ ಶಂಭುಲಿಂಗ ಕಾಂಬಳೆ ನಿರೂಪಿಸಿದರು. ಎಸ್.ಎ. ಮಟ್ಟೆಪ್ಪನವರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಾಗೂ ಶೈಕ್ಷಣಿಕ ಕಾರ್ಯಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುವಂತಾಗಲು ಎಸ್.ಡಿ.ಎಂ.ಸಿ. ಸದಸ್ಯರ ಕೊಡುಗೆ ಅಪಾರವಾಗಿದೆ. ಶಿಕ್ಷಕರೊಂದಿಗೆ ಸಮಾಲೋಚಿಸಿ ನಡೆಸಿ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಿದರೆ ಶಾಲೆಗಳು ಮಾದರಿಯಾಗುತ್ತವೆ’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಜಡೆಪ್ಪ ಕುಂಬಾರ ಹೇಳಿದರು.</p>.<p>ಸಮೀಪದ ಸತ್ತಿ ಗ್ರಾಮದ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಬಿಇಒ ಕಚೇರಿ ಹಾಗೂ ವಲಯ ಸಮೂಹ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಿದ್ದ ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಮುಖ್ಯಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ವಿಠಲ ತಟ್ರಿ, ಅಣ್ಣಪ್ಪ ರುದ್ರಗೌಡರ, ವಲಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ.ಎಚ್. ಜುಲಪಿ, ಆರ್.ಕೆ. ಹಳ್ಳೋಳ್ಳಿ, ಸುನೀಲ ಸನದಿ, ಎ.ಆರ್. ಹುಣಸಿಕಟ್ಟಿ, ಇಲಾಯಿ ಮೀರಾಬಾಯಿ, ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಚಿದಾನಂದ ಪಾಟೀಲ ಇದ್ದರು.</p>.<p>ವಿವಿಧ 12 ಶಾಲೆಗಳ ಎಸ್ಡಿಎಂಸಿ ಸದಸ್ಯರು ಶಿಬಿರದಲ್ಲಿ ಭಾಗವಹಿಸಿದ್ದರು.</p>.<p>ಶಿಕ್ಷಕ ಶಂಭುಲಿಂಗ ಕಾಂಬಳೆ ನಿರೂಪಿಸಿದರು. ಎಸ್.ಎ. ಮಟ್ಟೆಪ್ಪನವರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>