<p><strong>ಬೆಳಗಾವಿ</strong>: ‘ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಯಾವುದೇ ಕಾನೂನು ಅಥವಾ ನಿಯಮಗಳು ಉಲ್ಲಂಘನೆಯಾದಲ್ಲಿ, ಸರಿಯಾದ ಕಾಯ್ದೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು. ಆ ಸಂದರ್ಭಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಸಲಹೆ ನೀಡಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸು ತಿಳಿಸಿದರು.</p>.<p>ನಗರದಲ್ಲಿ ಕಾರ್ಮಿಕ ಇಲಾಖೆಯ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳು ಹಾಗೂ ಇನ್ಸ್ಪೆಕ್ಟರ್ಗಳಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಲಾಖೆಯ ಅಧಿಕಾರಿಗಳು ಕರ್ತವ್ಯದ ಜೊತೆಗೆ ವಿವಿಧ ತರಬೇತಿಗಳನ್ನು ಪಡೆಯಬೇಕು. ಕಾನೂನು– ಕಾಯ್ದೆಗಳ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಸವಾಲುಗಳು ಎದುರಾದರೂ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಲಿವೆ’ ಎಂದು ಹೇಳಿದರು.</p>.<p>‘ಅಧಿಕಾರಿಗಳು ದಾಳಿ ನಡೆಸಿದಾಗ ಹೆಚ್ಚಿನ ಸಾಕ್ಷಿ ಸಂಗ್ರಹಿಸಬೇಕು. ಪ್ರಸ್ತುತ ತಂತ್ರಜ್ಞಾನ ಬಳಕೆಯ ಮೂಲಕ ವಿಡಿಯೊ ಹಾಗೂ ಫೋಟೊ ಸಾಕ್ಷಿ ಸಂಗ್ರಹಿಸಿ ಪ್ರಕರಣ ದಾಖಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಅಧಿಕಾರಿಗಳಾದ ಕೆ.ಜಿ. ಜಾನ್ಸನ್, ಸಂಗಮೇಶ ಹಿರೇಮಠ, ವಕೀಲರಾದ ಅಶೋಕ ಹಲಗಲಿ, ಶ್ರೀಕಾಂತ ಕೆ.ಎಸ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಯಾವುದೇ ಕಾನೂನು ಅಥವಾ ನಿಯಮಗಳು ಉಲ್ಲಂಘನೆಯಾದಲ್ಲಿ, ಸರಿಯಾದ ಕಾಯ್ದೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು. ಆ ಸಂದರ್ಭಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಸಲಹೆ ನೀಡಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸು ತಿಳಿಸಿದರು.</p>.<p>ನಗರದಲ್ಲಿ ಕಾರ್ಮಿಕ ಇಲಾಖೆಯ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳು ಹಾಗೂ ಇನ್ಸ್ಪೆಕ್ಟರ್ಗಳಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಲಾಖೆಯ ಅಧಿಕಾರಿಗಳು ಕರ್ತವ್ಯದ ಜೊತೆಗೆ ವಿವಿಧ ತರಬೇತಿಗಳನ್ನು ಪಡೆಯಬೇಕು. ಕಾನೂನು– ಕಾಯ್ದೆಗಳ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಸವಾಲುಗಳು ಎದುರಾದರೂ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಲಿವೆ’ ಎಂದು ಹೇಳಿದರು.</p>.<p>‘ಅಧಿಕಾರಿಗಳು ದಾಳಿ ನಡೆಸಿದಾಗ ಹೆಚ್ಚಿನ ಸಾಕ್ಷಿ ಸಂಗ್ರಹಿಸಬೇಕು. ಪ್ರಸ್ತುತ ತಂತ್ರಜ್ಞಾನ ಬಳಕೆಯ ಮೂಲಕ ವಿಡಿಯೊ ಹಾಗೂ ಫೋಟೊ ಸಾಕ್ಷಿ ಸಂಗ್ರಹಿಸಿ ಪ್ರಕರಣ ದಾಖಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಅಧಿಕಾರಿಗಳಾದ ಕೆ.ಜಿ. ಜಾನ್ಸನ್, ಸಂಗಮೇಶ ಹಿರೇಮಠ, ವಕೀಲರಾದ ಅಶೋಕ ಹಲಗಲಿ, ಶ್ರೀಕಾಂತ ಕೆ.ಎಸ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>