ಅಪಾಯಕಾರಿ ಮರ ತೆರವುಗೊಳಿಸಿ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹಾಗೂ ಕಾಂಗ್ರೆಸ್ ಭವನ ಆವರಣದ ಪಕ್ಕದಲ್ಲಿ ಬೃಹತ್ ಮರಗಳಿವೆ. ಅವುಗಳನ್ನು ಪರಿಶೀಲಿಸಿ, ಅಪಾಯಕಾರಿ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸಬೇಕು ಎಂದು ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು, ಬೆಳಗಾವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.