<p><strong>ಬೆಳಗಾವಿ</strong>: 'ಕಾನೂನು ಕೋರ್ಸ್ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಶೋಷಣೆಗೆ ಒಳಗಾದವರಿಗೆ ನಿಸ್ವಾರ್ಥ ಮನೋಭಾವದಿಂದ ನ್ಯಾಯ ಒದಗಿಸಲು ಪ್ರಯತ್ನಿಸಬೇಕು' ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಕರೆಕೊಟ್ಟರು.</p><p>ಇಲ್ಲಿನ ಕೆಎಲ್ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಯುಕ್ತ, ಹಳೇ ವಿದ್ಯಾರ್ಥಿಗಳ ಸಂಘ ಭಾನುವಾರ ಆಯೋಜಿಸಿದ್ದ ವಾಕಥಾನ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.</p><p>'ಕೆಎಲ್ಇ ಸಂಸ್ಥೆ ಕಾನೂನು ಪದವಿ ಕೋರ್ಸ್ಗಳಿಗೆ ಆದ್ಯತೆ ನೀಡಿ, ಗುಣಾತ್ಮಕ ಶಿಕ್ಷಣ ನೀಡುತ್ತಿದೆ. ನಮ್ಮ ಹಲವಾರು ವಿದ್ಯಾರ್ಥಿಗಳು ಕಾನೂನು ಪದವಿಯೊಂದಿಗೆ ದೇಶದ ನ್ಯಾಯಾಂಗ ಸೇವೆಯಲ್ಲಿ ತೊಡಗಿದ್ದಾರೆ. ಈ ನಿಟ್ಟಿನಲ್ಲಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯವೂ ಕಳೆದ 50 ವರ್ಷಗಳಿಂದ ಅಸಂಖ್ಯ ವಿದ್ಯಾರ್ಥಿಗಳನ್ನು ರೂಪಿಸಿದೆ' ಎಂದು ತಿಳಿಸಿದರು.</p><p>'ಕಳೆದ 109 ವರ್ಷಗಳಲ್ಲಿ ಕೆಎಲ್ಇ ಸಂಸ್ಥೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅಗಾಧವಾಗಿ ಬೆಳೆದು ನಿಂತಿದೆ. ಇದರೊಂದಿಗೆ ಸಾಮಾಜಿಕ ಸೇವೆಯನ್ನು ನಿರಂತರವಾಗಿ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ಸೇವೆ ಇನ್ನಷ್ಟು ವಿಸ್ತರಿಸಲಿದೆ' ಎಂದರು.</p><p>'ಬೆಳಗಾವಿ ಮಾತ್ರವಲ್ಲದೆ; ಗದಗ, ಹುಬ್ಬಳ್ಳಿ, ಚಿಕ್ಕೋಡಿ, ಬೆಂಗಳೂರು ಹಾಗೂ ಮುಂಬೈನಲ್ಲಿ ಸಂಸ್ಥೆಯು ಕಾನೂನು ಮಹಾವಿದ್ಯಾಲಯ ಮುನ್ನಡೆಸುತ್ತಿದೆ.</p><p>ಇವು ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಉತ್ತಮ ವಕೀಲರನ್ನು ರೂಪಿಸಿ, ಸಮಾಜಕ್ಕೆ ಸಮರ್ಪಿಸುತ್ತಿವೆ. ಈ ವಿದ್ಯಾರ್ಥಿಗಳು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಂಸ್ಥೆಗೆ ಹೆಸರು ತಂದಿದ್ದಾರೆ' ಎಂದು ಶ್ಲಾಘಿಸಿದರು.</p><p>'ಕೆಎಲ್ಇ ಸಂಸ್ಥೆಯು ಮುಂದಿನ ದಿನಗಳಲ್ಲಿ ಬೆಳಗಾವಿ ಹತ್ತಿರ ಸಾಂಬ್ರಾ ರಸ್ತೆಯಲ್ಲಿ ಹೊಸ ಕಾನೂನು ಮಹಾವಿದ್ಯಾಲಯ ಸ್ಥಾಪಿಸಲು ಯೋಜಿಸಿದೆ' ಎಂದು ತಿಳಿಸಿದರು. </p><p>ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಬಿ.ಬೆಲ್ಲದ, 'ಹಳೆಯ ವಿದ್ಯಾರ್ಥಿಗಳು ಪ್ರಸ್ತುತ ನಮ್ಮಲ್ಲಿ ಅಧ್ಯಯನ ನಡೆಸುತ್ತಿರುವ ಕಾನೂನು ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನ, ಕೌಶಲ ಧಾರೆ ಎರೆದು ಅವರು ಸಮಾಜಮುಖಿಯಾಗಿ ಉತ್ತಮ ವಕೀಲರಾಗಲು ನೆರವಾಗಬೇಕು' ಎಂದು ಕರೆ ಕೊಟ್ಟರು. </p><p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಡಾ.ಜ್ಯೋತಿ ಹಿರೇಮಠ ಮಾತನಾಡಿ, 'ಹಳೆಯ ವಿದ್ಯಾರ್ಥಿಗಳೇ ಕಾಲೇಜಿನ ರಾಯಭಾರಿಗಳು. ನಿಮ್ಮ ಸಲಹೆ, ಸೂಚನೆಗಳು ಕಾಲೇಜಿನ ಬೆಳವಣಿಗೆಗೆ ಅಗತ್ಯ. ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವಿಡೀ ವಿವಿಧ ರಚನಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ' ಎಂದು ಹೇಳಿದರು.</p><p>ಟಿ.ಸಿ.ಮೋದಗಿ, ವಿ.ಸಿ.ಬೆಂಬಳಗಿ, ಸುನೀಲ ತುಬಚಿ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ರೀಚಾ ರಾವ್ ಇದ್ದರು.</p><p><strong>400ಕ್ಕೂ ಅಧಿಕ ಹಳೇ ವಿದ್ಯಾರ್ಥಿಗಳು ಭಾಗಿ:</strong> ಕಾಲೇಜು ಆವರಣದಿಂದ ಆರಂಭಗೊಂಡ ವಾಕಥಾನ್ ಕಿತ್ತೂರು ರಾಣಿ ಚನ್ನಮ್ಮನ ವೃತ್ತ, ಕ್ಯಾಂಪ್ ಪ್ರದೇಶ ಮಾರ್ಗವಾಗಿ ರೈಲ್ವೆ ನಿಲ್ದಾಣ ವೃತ್ತ ತಲುಪಿ, ಮರಳಿ ಕಾಲೇಜು ಆವರಣಕ್ಕೆ ಬಂದು ಮುಕ್ತಾಯಗೊಂಡಿತು.</p><p>ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಸಾಗರ ಬೆಳವಿ ಮತ್ತು ಮಹಿಳೆಯರ ವಿಭಾಗದಲ್ಲಿ </p><p>ಭಾಗ್ಯಶ್ರೀ ಮಗನಟ್ಟಿ ಕ್ರಮವಾಗಿ ಪ್ರಥಮ ಸ್ಥಾನ ಗಳಿಸಿದರು. 400ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: 'ಕಾನೂನು ಕೋರ್ಸ್ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಶೋಷಣೆಗೆ ಒಳಗಾದವರಿಗೆ ನಿಸ್ವಾರ್ಥ ಮನೋಭಾವದಿಂದ ನ್ಯಾಯ ಒದಗಿಸಲು ಪ್ರಯತ್ನಿಸಬೇಕು' ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಕರೆಕೊಟ್ಟರು.</p><p>ಇಲ್ಲಿನ ಕೆಎಲ್ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಯುಕ್ತ, ಹಳೇ ವಿದ್ಯಾರ್ಥಿಗಳ ಸಂಘ ಭಾನುವಾರ ಆಯೋಜಿಸಿದ್ದ ವಾಕಥಾನ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.</p><p>'ಕೆಎಲ್ಇ ಸಂಸ್ಥೆ ಕಾನೂನು ಪದವಿ ಕೋರ್ಸ್ಗಳಿಗೆ ಆದ್ಯತೆ ನೀಡಿ, ಗುಣಾತ್ಮಕ ಶಿಕ್ಷಣ ನೀಡುತ್ತಿದೆ. ನಮ್ಮ ಹಲವಾರು ವಿದ್ಯಾರ್ಥಿಗಳು ಕಾನೂನು ಪದವಿಯೊಂದಿಗೆ ದೇಶದ ನ್ಯಾಯಾಂಗ ಸೇವೆಯಲ್ಲಿ ತೊಡಗಿದ್ದಾರೆ. ಈ ನಿಟ್ಟಿನಲ್ಲಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯವೂ ಕಳೆದ 50 ವರ್ಷಗಳಿಂದ ಅಸಂಖ್ಯ ವಿದ್ಯಾರ್ಥಿಗಳನ್ನು ರೂಪಿಸಿದೆ' ಎಂದು ತಿಳಿಸಿದರು.</p><p>'ಕಳೆದ 109 ವರ್ಷಗಳಲ್ಲಿ ಕೆಎಲ್ಇ ಸಂಸ್ಥೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅಗಾಧವಾಗಿ ಬೆಳೆದು ನಿಂತಿದೆ. ಇದರೊಂದಿಗೆ ಸಾಮಾಜಿಕ ಸೇವೆಯನ್ನು ನಿರಂತರವಾಗಿ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ಸೇವೆ ಇನ್ನಷ್ಟು ವಿಸ್ತರಿಸಲಿದೆ' ಎಂದರು.</p><p>'ಬೆಳಗಾವಿ ಮಾತ್ರವಲ್ಲದೆ; ಗದಗ, ಹುಬ್ಬಳ್ಳಿ, ಚಿಕ್ಕೋಡಿ, ಬೆಂಗಳೂರು ಹಾಗೂ ಮುಂಬೈನಲ್ಲಿ ಸಂಸ್ಥೆಯು ಕಾನೂನು ಮಹಾವಿದ್ಯಾಲಯ ಮುನ್ನಡೆಸುತ್ತಿದೆ.</p><p>ಇವು ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಉತ್ತಮ ವಕೀಲರನ್ನು ರೂಪಿಸಿ, ಸಮಾಜಕ್ಕೆ ಸಮರ್ಪಿಸುತ್ತಿವೆ. ಈ ವಿದ್ಯಾರ್ಥಿಗಳು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಂಸ್ಥೆಗೆ ಹೆಸರು ತಂದಿದ್ದಾರೆ' ಎಂದು ಶ್ಲಾಘಿಸಿದರು.</p><p>'ಕೆಎಲ್ಇ ಸಂಸ್ಥೆಯು ಮುಂದಿನ ದಿನಗಳಲ್ಲಿ ಬೆಳಗಾವಿ ಹತ್ತಿರ ಸಾಂಬ್ರಾ ರಸ್ತೆಯಲ್ಲಿ ಹೊಸ ಕಾನೂನು ಮಹಾವಿದ್ಯಾಲಯ ಸ್ಥಾಪಿಸಲು ಯೋಜಿಸಿದೆ' ಎಂದು ತಿಳಿಸಿದರು. </p><p>ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಬಿ.ಬೆಲ್ಲದ, 'ಹಳೆಯ ವಿದ್ಯಾರ್ಥಿಗಳು ಪ್ರಸ್ತುತ ನಮ್ಮಲ್ಲಿ ಅಧ್ಯಯನ ನಡೆಸುತ್ತಿರುವ ಕಾನೂನು ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನ, ಕೌಶಲ ಧಾರೆ ಎರೆದು ಅವರು ಸಮಾಜಮುಖಿಯಾಗಿ ಉತ್ತಮ ವಕೀಲರಾಗಲು ನೆರವಾಗಬೇಕು' ಎಂದು ಕರೆ ಕೊಟ್ಟರು. </p><p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಡಾ.ಜ್ಯೋತಿ ಹಿರೇಮಠ ಮಾತನಾಡಿ, 'ಹಳೆಯ ವಿದ್ಯಾರ್ಥಿಗಳೇ ಕಾಲೇಜಿನ ರಾಯಭಾರಿಗಳು. ನಿಮ್ಮ ಸಲಹೆ, ಸೂಚನೆಗಳು ಕಾಲೇಜಿನ ಬೆಳವಣಿಗೆಗೆ ಅಗತ್ಯ. ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವಿಡೀ ವಿವಿಧ ರಚನಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ' ಎಂದು ಹೇಳಿದರು.</p><p>ಟಿ.ಸಿ.ಮೋದಗಿ, ವಿ.ಸಿ.ಬೆಂಬಳಗಿ, ಸುನೀಲ ತುಬಚಿ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ರೀಚಾ ರಾವ್ ಇದ್ದರು.</p><p><strong>400ಕ್ಕೂ ಅಧಿಕ ಹಳೇ ವಿದ್ಯಾರ್ಥಿಗಳು ಭಾಗಿ:</strong> ಕಾಲೇಜು ಆವರಣದಿಂದ ಆರಂಭಗೊಂಡ ವಾಕಥಾನ್ ಕಿತ್ತೂರು ರಾಣಿ ಚನ್ನಮ್ಮನ ವೃತ್ತ, ಕ್ಯಾಂಪ್ ಪ್ರದೇಶ ಮಾರ್ಗವಾಗಿ ರೈಲ್ವೆ ನಿಲ್ದಾಣ ವೃತ್ತ ತಲುಪಿ, ಮರಳಿ ಕಾಲೇಜು ಆವರಣಕ್ಕೆ ಬಂದು ಮುಕ್ತಾಯಗೊಂಡಿತು.</p><p>ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಸಾಗರ ಬೆಳವಿ ಮತ್ತು ಮಹಿಳೆಯರ ವಿಭಾಗದಲ್ಲಿ </p><p>ಭಾಗ್ಯಶ್ರೀ ಮಗನಟ್ಟಿ ಕ್ರಮವಾಗಿ ಪ್ರಥಮ ಸ್ಥಾನ ಗಳಿಸಿದರು. 400ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>