ಬೆಳಗಾವಿ: ಅಂದಾಜು ₹25.93 ಲಕ್ಷ ಮೌಲ್ಯದ ರಸಗೊಬ್ಬರ ಕಳವು ಮಾಡಿದ ಐವರು ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಗಳಿಂದ ಕಳವಾದ ಮಾಲು ವಶಕ್ಕೆ ಪಡೆಯಲಾಗಿದೆ.
ಬಂಧಿತರಿಂದ ಡಿ.ಎ.ಪಿ ರಸಗೊಬ್ಬರದ 810 ಚೀಲಗಳು, ಕಳ್ಳತನ ಮಾಡಲು ಉಪಯೋಗಿಸಿದ ಎರಡು ಟ್ರಕ್ ವಶಕ್ಕೆ ಪಡೆಯಲಾಗಿದೆ.
ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ದೇಸೂರ ರೈಲ್ವೆ ಸ್ಟೇಷನ್ ಹತ್ತಿರದ ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ ಈ ಗೊಬ್ಬರದ ಮೂಟೆಗಳನ್ನು ಮೇ 23ರಂದು ಕಳವು ಮಾಡಲಾಗಿತ್ತು. ಶಿವಾಜಿ ಬಾಳಾರಾಮ ಆನಂದಾಚೆ ಎನ್ನುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ಶ್ರೀನಿವಾಸ ಹಾಂಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.