<p><strong>ಖಾನಾಪುರ</strong>: ಬೆಳಗಾವಿ–ಪಣಜಿ ರಾಷ್ಟ್ರೀಯ ಹೆದ್ದಾರಿಯ ತಾಲ್ಲೂಕಿನ ಅಸ್ತೋಲಿ ಗ್ರಾಮದ ಹೊರವಲಯದಲ್ಲಿ ಗುರುವಾರ ಇನ್ನೊವಾ ಮತ್ತು ಕ್ವಿಡ್ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕ್ವಿಡ್ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಇನ್ನೋವಾ ಕಾರಿನಲ್ಲಿದ್ದ ಕಾರಿನ ಚಾಲಕ ಗಂಭೀರವಾಗಿ ಮತ್ತು ಉಳಿದ ಪ್ರಯಾಣಿಕರು ಸಾಧಾರಣ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.</p>.<p>ಈ ಅಪಘಾತದಲ್ಲಿ ಕ್ವಿಡ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸೌತ್ ಗೋವಾ ಜಿಲ್ಲೆಯ ಫೋಂಡಾ ನಿವಾಸಿಗಳಾದ ರುದ್ರಯ್ಯ ಶಿವಯ್ಯನವರ (77) ಮತ್ತು ರೇಣುಕಾ ಹಿರೇಮಠ (55) ಮೃತಪಟ್ಟಿದ್ದಾರೆ.</p>.<p>ಇದೇ ಕಾರಿನಲ್ಲಿದ್ದ ಶಿವರಾಜ ಹಿರೇಮಠ, ಬಸವ್ವ ರುದ್ರಯ್ಯ ಶಿವಯ್ಯನವರ ಮತ್ತು ಇನ್ನೊವಾ ಕಾರಿನ ಚಾಲಕ, ಹುಬ್ಬಳ್ಳಿ ನಿವಾಸಿ ಹಜರತಲಿ ಕುಣಬಿ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಗೋವಾದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಇನ್ನೊವಾ ಕಾರು ಮತ್ತು ಹುಬ್ಬಳ್ಳಿಯಿಂದ ಗೋವಾದತ್ತ ಸಾಗುತ್ತಿದ್ದ ಕ್ವಿಡ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಇನ್ನೊವಾ ಚಾಲಕ ತನ್ನ ಕಾರನ್ನು ನಿಷ್ಕಾಳಜಿತನದಿಂದ ಚಲಾಯಿಸಿ ಎದುರಿನಿಂದ ಬರುತ್ತಿದ್ದ ಕ್ವಿಡ್ ಕಾರಿಗೆ ಗುದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ</strong>: ಬೆಳಗಾವಿ–ಪಣಜಿ ರಾಷ್ಟ್ರೀಯ ಹೆದ್ದಾರಿಯ ತಾಲ್ಲೂಕಿನ ಅಸ್ತೋಲಿ ಗ್ರಾಮದ ಹೊರವಲಯದಲ್ಲಿ ಗುರುವಾರ ಇನ್ನೊವಾ ಮತ್ತು ಕ್ವಿಡ್ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕ್ವಿಡ್ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಇನ್ನೋವಾ ಕಾರಿನಲ್ಲಿದ್ದ ಕಾರಿನ ಚಾಲಕ ಗಂಭೀರವಾಗಿ ಮತ್ತು ಉಳಿದ ಪ್ರಯಾಣಿಕರು ಸಾಧಾರಣ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.</p>.<p>ಈ ಅಪಘಾತದಲ್ಲಿ ಕ್ವಿಡ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸೌತ್ ಗೋವಾ ಜಿಲ್ಲೆಯ ಫೋಂಡಾ ನಿವಾಸಿಗಳಾದ ರುದ್ರಯ್ಯ ಶಿವಯ್ಯನವರ (77) ಮತ್ತು ರೇಣುಕಾ ಹಿರೇಮಠ (55) ಮೃತಪಟ್ಟಿದ್ದಾರೆ.</p>.<p>ಇದೇ ಕಾರಿನಲ್ಲಿದ್ದ ಶಿವರಾಜ ಹಿರೇಮಠ, ಬಸವ್ವ ರುದ್ರಯ್ಯ ಶಿವಯ್ಯನವರ ಮತ್ತು ಇನ್ನೊವಾ ಕಾರಿನ ಚಾಲಕ, ಹುಬ್ಬಳ್ಳಿ ನಿವಾಸಿ ಹಜರತಲಿ ಕುಣಬಿ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಗೋವಾದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಇನ್ನೊವಾ ಕಾರು ಮತ್ತು ಹುಬ್ಬಳ್ಳಿಯಿಂದ ಗೋವಾದತ್ತ ಸಾಗುತ್ತಿದ್ದ ಕ್ವಿಡ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಇನ್ನೊವಾ ಚಾಲಕ ತನ್ನ ಕಾರನ್ನು ನಿಷ್ಕಾಳಜಿತನದಿಂದ ಚಲಾಯಿಸಿ ಎದುರಿನಿಂದ ಬರುತ್ತಿದ್ದ ಕ್ವಿಡ್ ಕಾರಿಗೆ ಗುದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>