<p><strong>ಬೆಳಗಾವಿ:</strong> ತಾಲ್ಲೂಕಿನ ಬಂಗರಗಾ– ದೇವಗಿರಿ ಕ್ರಾಸ್ ಬಳಿ ಬುಧವಾರ ರಾತ್ರಿ ಟಿಪ್ಪರ್ ಹಾಗೂ ಕಾರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಒಬ್ಬ ಬಾಲಕಿ ಹಾಗೂ ಒಬ್ಬ ಯುವಕ ಸಜೀವ ದಹನವಾಗಿದ್ದಾರೆ.</p>.<p>ಬೆಳಗಾವಿ ತಾಲ್ಲೂಕಿನ ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳಗಾಂವಕರ್ (24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮೀಕ್ಷಾ (12) ಮೃತರು. ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗುಂದಕರ್ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.</p>.<p>ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಈ ಇಬ್ಬರೂ ತಮ್ಮ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಬುಧವಾರ ರಾತ್ರಿ ಬಂಬರಗಾ ಗ್ರಾಮಕ್ಕೆ ಮರಳುತ್ತಿದ್ದರು. ಊರು ಕೆಲವೇ ನಿಮಿಷಗಳಷ್ಟು ದೂರ ಇರುವಾಗ, ದೇವಗಿರಿ ಕ್ರಾಸ್ ಬಳಿ ಟಿಪ್ಪರ್ ಅಡ್ಡ ಬಂತು. ಇಬ್ಬರೂ ಚಾಲಕರ ನಿಯಂತ್ರಣ ತಪ್ಪಿ ವಾಹನಗಳು ಡಿಕ್ಕಿಯಾದವು.</p>.<p>ಅಪಘಾತದ ರಭಸಕ್ಕೆ ಟಿಪ್ಪರ್ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿತು. ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪೈಕಿ ಇಬ್ಬರು ಸಜೀವ ದಹನವಾದರು. ಗಂಭೀರ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದರು. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಅಷ್ಟರೊಳಗೆ ಇಬ್ಬರ ದೇಹಗಳು ಕರಕಲಾಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಡಿಸಿಪಿ ಸ್ನೇಹಾ, ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಶವಗಳನ್ನು ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಟಿಪ್ಪರ್ ಚಾಲಕ ರಾತ್ರಿಯೇ ಕಾಕತಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಬಂಗರಗಾ– ದೇವಗಿರಿ ಕ್ರಾಸ್ ಬಳಿ ಬುಧವಾರ ರಾತ್ರಿ ಟಿಪ್ಪರ್ ಹಾಗೂ ಕಾರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಒಬ್ಬ ಬಾಲಕಿ ಹಾಗೂ ಒಬ್ಬ ಯುವಕ ಸಜೀವ ದಹನವಾಗಿದ್ದಾರೆ.</p>.<p>ಬೆಳಗಾವಿ ತಾಲ್ಲೂಕಿನ ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳಗಾಂವಕರ್ (24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮೀಕ್ಷಾ (12) ಮೃತರು. ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗುಂದಕರ್ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.</p>.<p>ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಈ ಇಬ್ಬರೂ ತಮ್ಮ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಬುಧವಾರ ರಾತ್ರಿ ಬಂಬರಗಾ ಗ್ರಾಮಕ್ಕೆ ಮರಳುತ್ತಿದ್ದರು. ಊರು ಕೆಲವೇ ನಿಮಿಷಗಳಷ್ಟು ದೂರ ಇರುವಾಗ, ದೇವಗಿರಿ ಕ್ರಾಸ್ ಬಳಿ ಟಿಪ್ಪರ್ ಅಡ್ಡ ಬಂತು. ಇಬ್ಬರೂ ಚಾಲಕರ ನಿಯಂತ್ರಣ ತಪ್ಪಿ ವಾಹನಗಳು ಡಿಕ್ಕಿಯಾದವು.</p>.<p>ಅಪಘಾತದ ರಭಸಕ್ಕೆ ಟಿಪ್ಪರ್ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿತು. ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪೈಕಿ ಇಬ್ಬರು ಸಜೀವ ದಹನವಾದರು. ಗಂಭೀರ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದರು. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಅಷ್ಟರೊಳಗೆ ಇಬ್ಬರ ದೇಹಗಳು ಕರಕಲಾಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಡಿಸಿಪಿ ಸ್ನೇಹಾ, ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಶವಗಳನ್ನು ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಟಿಪ್ಪರ್ ಚಾಲಕ ರಾತ್ರಿಯೇ ಕಾಕತಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>