<p><strong>ಬೆಳಗಾವಿ</strong>: ನಗರದ ಟಿಳಕವಾಡಿ ಕಾಂಗ್ರೆಸ್ ರಸ್ತೆಯ ಅಪಾರ್ಪ್ಮೆಂಟ್ ಒಂದರಲ್ಲಿ ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಶನಿವಾರ ಬಂಧಿಸಿರುವ ಸಿಇಎನ್ (ಸೈಬರ್, ಎಕನಾಮಿಕ್ಸ್ ಆ್ಯಂಡ್ ನಾರ್ಕೋಟಿಕ್) ಠಾಣೆ ಪೊಲೀಸರು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.</p>.<p>ಟಿಳಕವಾಡಿ ಮರಾಠಾ ಕಾಲೊನಿಯ ಪ್ರಕಾಶ ಕನ್ನಪ್ಪ ಯಳ್ಳೂರಕರ (27) ಹಾಗೂ ಹಳೆ ಬೆಳಗಾವಿಯ ಮರಗಾಯಿ ಗಲ್ಲಿಯ ವಿನಾಯಕ ಕೇದಾರಿ ಶಿಂಧೆ (37) ಬಂಧಿತರು. ಸ್ಥಳದಲ್ಲಿದ್ದ, ಅನೈತಿಕ ಚಟುವಟಿಕೆಗೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಪ್ರಕರಣ ದಾಖಲಾಗಿದೆ. ತಂಡಕ್ಕೆ ನಗರ ಪೊಲೀಸ್ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.</p>.<p>‘ನಗರದಲ್ಲಿ ಸ್ಪಾ ನಡೆಸುವವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಸಿಬ್ಬಂದಿಯ ದಾಖಲೆಗಳನ್ನು ನಿರ್ವಹಿಸಬೇಕು. ಅನೈತಿಕ ಚಟುವಟಿಕೆಗಳನ್ನು ನಡೆಸಬಾರದು. ಇದನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಡಿಸಿಪಿ ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರದ ಟಿಳಕವಾಡಿ ಕಾಂಗ್ರೆಸ್ ರಸ್ತೆಯ ಅಪಾರ್ಪ್ಮೆಂಟ್ ಒಂದರಲ್ಲಿ ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಶನಿವಾರ ಬಂಧಿಸಿರುವ ಸಿಇಎನ್ (ಸೈಬರ್, ಎಕನಾಮಿಕ್ಸ್ ಆ್ಯಂಡ್ ನಾರ್ಕೋಟಿಕ್) ಠಾಣೆ ಪೊಲೀಸರು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.</p>.<p>ಟಿಳಕವಾಡಿ ಮರಾಠಾ ಕಾಲೊನಿಯ ಪ್ರಕಾಶ ಕನ್ನಪ್ಪ ಯಳ್ಳೂರಕರ (27) ಹಾಗೂ ಹಳೆ ಬೆಳಗಾವಿಯ ಮರಗಾಯಿ ಗಲ್ಲಿಯ ವಿನಾಯಕ ಕೇದಾರಿ ಶಿಂಧೆ (37) ಬಂಧಿತರು. ಸ್ಥಳದಲ್ಲಿದ್ದ, ಅನೈತಿಕ ಚಟುವಟಿಕೆಗೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಪ್ರಕರಣ ದಾಖಲಾಗಿದೆ. ತಂಡಕ್ಕೆ ನಗರ ಪೊಲೀಸ್ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.</p>.<p>‘ನಗರದಲ್ಲಿ ಸ್ಪಾ ನಡೆಸುವವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಸಿಬ್ಬಂದಿಯ ದಾಖಲೆಗಳನ್ನು ನಿರ್ವಹಿಸಬೇಕು. ಅನೈತಿಕ ಚಟುವಟಿಕೆಗಳನ್ನು ನಡೆಸಬಾರದು. ಇದನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಡಿಸಿಪಿ ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>