<p><strong>ಬೆಳಗಾವಿ:</strong> ‘ಬೆಳಗಾವಿ ಲೋಕಾಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ಗೆ ಇಬ್ಬರ ಹೆಸರು ಅಂತಿಮವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲು ಮೂರು ಹೆಸರುಗಳನ್ನು ಸೂಚಿಸಲಾಗಿತ್ತು. ಅದರಲ್ಲಿ ಇಬ್ಬರು ಹೆಸರು ಅಂತಿಮವಾಗಿದೆ’ ಎಂದರು. ಹೆಸರು ಬಹಿರಂಗಪಡಿಸಲು ನಿರಾಕರಿಸಿದರು.</p>.<p>‘ನನ್ನ ಹೆಸರಿರುವ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.</p>.<p>ಪಕ್ಷದ ಚಿಹ್ನೆಯಲ್ಲಿ ಮಹಾನಗರ ಪಾಲಿಕೆ ಚುನಾವಣೆ ಎದುರಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಧ್ಯಕ್ಷರು ಸಮಿತಿ ರಚಿಸಿದ್ದಾರೆ. ಡಿ.31ರಂದು ಬೆಂಗಳೂರಿನಲ್ಲಿ ಈ ವಿಚಾರವಾಗಿ ಸಭೆ ಇದೆ. ಅಲ್ಲಿ ಅಂತಿಮ ತೀರ್ಮಾನ ಮಾಡಲಾಗುವುದು’ ಎಂದರು.</p>.<p>‘ಪಾಲಿಕೆ ಎದುರು ಕನ್ನಡ ಭಾವುಟ ಹಾರಿಸಿರುವ ಬಗ್ಗೆ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ಮಾಡಬೇಕು. ಅನವಶ್ಯ ಸಮಸ್ಯೆ ಹುಟ್ಟು ಹಾಕದೆ ಬಗೆಹರಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಉಪ ಸಭಾಪತಿ ಧರ್ಮೇಗೌಡ ಅವರು ಈ ರೀತಿ ನಿರ್ಧಾರಕ್ಕೆ ಕೈ ಹಾಕಬಾರದಿತ್ತು. ಆತ್ಮಹತ್ಯೆ ಪ್ರಕರಣವನ್ನು ವಿಧಾನಪರಿಷತ್ನಲ್ಲಿ ನಡೆದ ಗಲಾಟೆಗೆ ಜೋಡಿಸಬೇಡಿ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಜನ ನಾಯಕರು ಹೀಗೆ ಮಾಡಿದರೆ ಜನಸಾಮಾನ್ಯರ ಮೇಲೆ ಖಂಡಿತಾ ಪರಿಣಾಮ ಬೀರುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಬೆಳಗಾವಿ ಲೋಕಾಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ಗೆ ಇಬ್ಬರ ಹೆಸರು ಅಂತಿಮವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲು ಮೂರು ಹೆಸರುಗಳನ್ನು ಸೂಚಿಸಲಾಗಿತ್ತು. ಅದರಲ್ಲಿ ಇಬ್ಬರು ಹೆಸರು ಅಂತಿಮವಾಗಿದೆ’ ಎಂದರು. ಹೆಸರು ಬಹಿರಂಗಪಡಿಸಲು ನಿರಾಕರಿಸಿದರು.</p>.<p>‘ನನ್ನ ಹೆಸರಿರುವ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.</p>.<p>ಪಕ್ಷದ ಚಿಹ್ನೆಯಲ್ಲಿ ಮಹಾನಗರ ಪಾಲಿಕೆ ಚುನಾವಣೆ ಎದುರಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಧ್ಯಕ್ಷರು ಸಮಿತಿ ರಚಿಸಿದ್ದಾರೆ. ಡಿ.31ರಂದು ಬೆಂಗಳೂರಿನಲ್ಲಿ ಈ ವಿಚಾರವಾಗಿ ಸಭೆ ಇದೆ. ಅಲ್ಲಿ ಅಂತಿಮ ತೀರ್ಮಾನ ಮಾಡಲಾಗುವುದು’ ಎಂದರು.</p>.<p>‘ಪಾಲಿಕೆ ಎದುರು ಕನ್ನಡ ಭಾವುಟ ಹಾರಿಸಿರುವ ಬಗ್ಗೆ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ಮಾಡಬೇಕು. ಅನವಶ್ಯ ಸಮಸ್ಯೆ ಹುಟ್ಟು ಹಾಕದೆ ಬಗೆಹರಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಉಪ ಸಭಾಪತಿ ಧರ್ಮೇಗೌಡ ಅವರು ಈ ರೀತಿ ನಿರ್ಧಾರಕ್ಕೆ ಕೈ ಹಾಕಬಾರದಿತ್ತು. ಆತ್ಮಹತ್ಯೆ ಪ್ರಕರಣವನ್ನು ವಿಧಾನಪರಿಷತ್ನಲ್ಲಿ ನಡೆದ ಗಲಾಟೆಗೆ ಜೋಡಿಸಬೇಡಿ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಜನ ನಾಯಕರು ಹೀಗೆ ಮಾಡಿದರೆ ಜನಸಾಮಾನ್ಯರ ಮೇಲೆ ಖಂಡಿತಾ ಪರಿಣಾಮ ಬೀರುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>