‘ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಬ್ಯಾಂಕ್ನಿಂದ ಈಗಾಗಲೇ ಹಣ ನೀಡಲಾಗಿದೆ. ಹೀಗಾಗಿ, ಇಂದಿನ ಅಗತ್ಯಕ್ಕೆ ತಕ್ಕಂತೆ ಹಾಗೂ ನಮ್ಮ ಜಿಲ್ಲೆಯಲ್ಲಿ ಇರುವ ಕೊರತೆ ನೀಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೂ ಚರ್ಚಿಸಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ಎದ್ದು ಕಾಣುತ್ತಿದೆ. ಇದನ್ನು ನಿವಾರಿಸುವುದಕ್ಕೆ ನಮ್ಮ ಕೊಡುಗೆ ಇದಾಗಲಿದೆ. ಸಮಾಜದ ಜೊತೆಗಿದ್ದೇವೆ ಎನ್ನುವುದನ್ನು ಬ್ಯಾಂಕ್ ಮತ್ತೊಮ್ಮೆ ಈ ಮೂಲಕ ತೋರಿಸುತ್ತಿದೆ’ ಎಂದು ಮಾಹಿತಿ ನೀಡಿದರು.