<p><strong>ಬೆಳಗಾವಿ: </strong>ದೀಪಾವಳಿ ಹಬ್ಬದ ಅಂಗವಾಗಿ ನೆರವೇರಿಸಿದ ಲಕ್ಷ್ಮಿಪೂಜೆಗೆ ಬಳಸಿದ್ದ ಸಾಮಗ್ರಿಗಳನ್ನು ಕೆರೆಯಲ್ಲಿ ವಿಸರ್ಜಿಸಲು ಹೋಗಿದ್ದ ಮೂವರು ಸಹೋದರಿಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಭಾನುವಾರ ನಡೆದಿದೆ.</p>.<p>ಅದೇ ಗ್ರಾಮದ ನೇತ್ರಾ ಕೊಳವಿ (8) ಹಾಗೂ ಪ್ರಿಯಾ ಕೊಳವಿ (6) ಮೃತರು. ಅಕ್ಕ ಸಂಧ್ಯಾ ಕೊಳವಿ (10) ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಪೂಜಾ ಸಾಮಗ್ರಿಗಳನ್ನು ವಿಸರ್ಜಿಸುತ್ತಿದ್ದಾಗ ಮೂವರೂ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಇದನ್ನು ನೋಡಿದ ಗ್ರಾಮ ಪಂಚಾಯ್ತಿ ಸದಸ್ಯ ಭುಜಂಗ ಗಿರಮಲ್ ಹಾಗೂ ಮುಖಂಡ ನಾಗೇಶ ದೇಸಾಯಿ ನೀರಿಗಿಳಿದು ಬಾಲಕಿಯರನ್ನು ಹೊರಗೆ ತಂದಿದ್ದಾರೆ. ಆ ವೇಳೆಗಾಗಲೇ ನೇತ್ರಾ ಮೃತಪಟ್ಟಿದ್ದಳು. ಪ್ರಿಯಾ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಈ ಬಾಲಕಿಯರ ತಂದೆ ಈರಣ್ಣ ಕೊಳವಿ ಮೂಲತಃ ಗೋಕಾಕ ತಾಲ್ಲೂಕಿನ ಯದ್ದಲಗುಡ್ಡದವರು. ಸಾಂಬ್ರಾದಲ್ಲಿ ಬಾಡಿಗೆ ಮನೆಯಲ್ಲಿ ಇರುತ್ತಾರೆ. ಕಾರವಾರದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈರಣ್ಣ ರಜೆ ಮುಗಿಸಿ ವಾಪಸ್ ಹೋಗಿದ್ದರು ಎಂದು ತಿಳಿದುಬಂದಿದೆ.</p>.<p>ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ. ಘಟನೆಯಿಂದ ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ದೀಪಾವಳಿ ಹಬ್ಬದ ಅಂಗವಾಗಿ ನೆರವೇರಿಸಿದ ಲಕ್ಷ್ಮಿಪೂಜೆಗೆ ಬಳಸಿದ್ದ ಸಾಮಗ್ರಿಗಳನ್ನು ಕೆರೆಯಲ್ಲಿ ವಿಸರ್ಜಿಸಲು ಹೋಗಿದ್ದ ಮೂವರು ಸಹೋದರಿಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಭಾನುವಾರ ನಡೆದಿದೆ.</p>.<p>ಅದೇ ಗ್ರಾಮದ ನೇತ್ರಾ ಕೊಳವಿ (8) ಹಾಗೂ ಪ್ರಿಯಾ ಕೊಳವಿ (6) ಮೃತರು. ಅಕ್ಕ ಸಂಧ್ಯಾ ಕೊಳವಿ (10) ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಪೂಜಾ ಸಾಮಗ್ರಿಗಳನ್ನು ವಿಸರ್ಜಿಸುತ್ತಿದ್ದಾಗ ಮೂವರೂ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಇದನ್ನು ನೋಡಿದ ಗ್ರಾಮ ಪಂಚಾಯ್ತಿ ಸದಸ್ಯ ಭುಜಂಗ ಗಿರಮಲ್ ಹಾಗೂ ಮುಖಂಡ ನಾಗೇಶ ದೇಸಾಯಿ ನೀರಿಗಿಳಿದು ಬಾಲಕಿಯರನ್ನು ಹೊರಗೆ ತಂದಿದ್ದಾರೆ. ಆ ವೇಳೆಗಾಗಲೇ ನೇತ್ರಾ ಮೃತಪಟ್ಟಿದ್ದಳು. ಪ್ರಿಯಾ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಈ ಬಾಲಕಿಯರ ತಂದೆ ಈರಣ್ಣ ಕೊಳವಿ ಮೂಲತಃ ಗೋಕಾಕ ತಾಲ್ಲೂಕಿನ ಯದ್ದಲಗುಡ್ಡದವರು. ಸಾಂಬ್ರಾದಲ್ಲಿ ಬಾಡಿಗೆ ಮನೆಯಲ್ಲಿ ಇರುತ್ತಾರೆ. ಕಾರವಾರದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈರಣ್ಣ ರಜೆ ಮುಗಿಸಿ ವಾಪಸ್ ಹೋಗಿದ್ದರು ಎಂದು ತಿಳಿದುಬಂದಿದೆ.</p>.<p>ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ. ಘಟನೆಯಿಂದ ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>