ಸಾರೋಟನಲ್ಲಿ ಆಸೀನರಾಗಿದ್ದ ಪೇಜಾವರ ಶ್ರೀಗಳನ್ನು ಮತ್ತು ವಿಶ್ವೇಶ ತೀರ್ಥರ ಭಾವಚಿತ್ರವನ್ನು ತೆರದ ಜೀಪಿನಲ್ಲಿ ಇಟ್ಟು ಭವ್ಯ ಮೆರವಣಿಗೆಯಲ್ಲಿ ಕರೆ ತರಲಾಯಿತು. ಮೆರವಣಿಗೆಯು ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ತೇರ ಬಜಾರ, ರಾಘವೇಂದ್ರ ರಥ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಪೂರ್ಣಕುಂಭ ಮೇಳೆ, ಡೊಳ್ಳು, ಜಾಂಜ್ ಪದಕಗಳ ಸದ್ದು ಮೊಳಗಿದವು. ಮಹಿಳೆಯರು ಆರತಿ ಹಿಡಿದು ಸಾಗಿದರು. ಭಕ್ತರು ಮತ್ತು ಮಕ್ಕಳು ಸಾಂಪ್ರದಾಯಿಕ ಉಡುಪು ತೊಟ್ಟು ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.