<p><strong>ಅಥಣಿ</strong> (ಬೆಳಗಾವಿ ಜಿಲ್ಲೆ): ದನದ ಕೊಟ್ಟಿಗೆ ನಿರ್ಮಾಣಕ್ಕೆ ಹಣ ಮಂಜೂರಾದ ನೆರವಿನ ಹಣ ನೀಡದ ಕಾರಣ, ರೈತ ಸತೀಶ ಕೋಳಿ ಅವರು ಸಂಬರಗಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಕಟ್ಟದ ಒಳಗಿನ ಕಿಟಕಿಗೆ ಎಮ್ಮೆ ಕಟ್ಟಿದ ರೈತ, ಅಲ್ಲೇ ಮೇವು ಹಾಕಿದರು. ಗಂಟೆಗಟ್ಟಲೇ ಎಮ್ಮೆಯನ್ನು ಅಲ್ಲೇ ಮಲಗಿಸಿದರು. ಸ್ಥಳಕ್ಕೆ ಬಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ರೈತನನ್ನು ಸಮಾಧಾನಪಡಿಸಿದರು.</p>.<p>‘ದನದ ಕೊಟ್ಟಿಗೆ ನಿರ್ಮಾಣಕ್ಕೆ ವರ್ಷದ ಹಿಂದೆಯೇ ಸಂಬರಗಿ ಗ್ರಾಮ ಪಂಚಾಯಿತಿಯಿಂದ ನನಗೆ ನೆರವಿನ ಹಣ ಮಂಜೂರಾಗಿದೆ. ₹50 ಸಾವಿರ ವೆಚ್ಚದಲ್ಲಿ ಕೊಟ್ಟಿಗೆ ಕಟ್ಟಿ ವರ್ಷವಾದರೂ ಹಣ ನೀಡುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ನಿಮಗೆ ಮಂಜೂರು ಮಾಡಿರುವ ಯೋಜನೆ ರದ್ದಾಗಿದೆ ಎಂದು ಹೇಳುತ್ತಾರೆ’ ಎಂದು ರೈತ ಸತೀಶ ದೂರಿದ್ದಾರೆ. ಅಧಿಕಾರಿ ನೀಡಿದ ಭರವಸೆ ಮೇರೆಗೆ ಅವರು ಎಮ್ಮೆಯನ್ನು ಮನೆಗೆ ಒಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong> (ಬೆಳಗಾವಿ ಜಿಲ್ಲೆ): ದನದ ಕೊಟ್ಟಿಗೆ ನಿರ್ಮಾಣಕ್ಕೆ ಹಣ ಮಂಜೂರಾದ ನೆರವಿನ ಹಣ ನೀಡದ ಕಾರಣ, ರೈತ ಸತೀಶ ಕೋಳಿ ಅವರು ಸಂಬರಗಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಕಟ್ಟದ ಒಳಗಿನ ಕಿಟಕಿಗೆ ಎಮ್ಮೆ ಕಟ್ಟಿದ ರೈತ, ಅಲ್ಲೇ ಮೇವು ಹಾಕಿದರು. ಗಂಟೆಗಟ್ಟಲೇ ಎಮ್ಮೆಯನ್ನು ಅಲ್ಲೇ ಮಲಗಿಸಿದರು. ಸ್ಥಳಕ್ಕೆ ಬಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ರೈತನನ್ನು ಸಮಾಧಾನಪಡಿಸಿದರು.</p>.<p>‘ದನದ ಕೊಟ್ಟಿಗೆ ನಿರ್ಮಾಣಕ್ಕೆ ವರ್ಷದ ಹಿಂದೆಯೇ ಸಂಬರಗಿ ಗ್ರಾಮ ಪಂಚಾಯಿತಿಯಿಂದ ನನಗೆ ನೆರವಿನ ಹಣ ಮಂಜೂರಾಗಿದೆ. ₹50 ಸಾವಿರ ವೆಚ್ಚದಲ್ಲಿ ಕೊಟ್ಟಿಗೆ ಕಟ್ಟಿ ವರ್ಷವಾದರೂ ಹಣ ನೀಡುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ನಿಮಗೆ ಮಂಜೂರು ಮಾಡಿರುವ ಯೋಜನೆ ರದ್ದಾಗಿದೆ ಎಂದು ಹೇಳುತ್ತಾರೆ’ ಎಂದು ರೈತ ಸತೀಶ ದೂರಿದ್ದಾರೆ. ಅಧಿಕಾರಿ ನೀಡಿದ ಭರವಸೆ ಮೇರೆಗೆ ಅವರು ಎಮ್ಮೆಯನ್ನು ಮನೆಗೆ ಒಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>