ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಬೇಕು. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬದವರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಅಂಗಡಿ ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರಯತ್ನ ಆರಂಭಿಸಿದ್ದರು.
ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ.
ದೆಹಲಿಯ ದ್ವಾರಕಾ ಸೆಕ್ಟರ್ 24ರಲ್ಲಿ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.