ಒಂದು ಹಂತದಲ್ಲಿ ಕುಟುಂಬದವರ ವಿರೋಧದ ಹಿನ್ನೆಲೆಯಲ್ಲಿ ಓಡುವ ಅಭ್ಯಾಸ ಮಾಡುವುದನ್ನು, ಸ್ಪರ್ಧೆಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದ್ದರು. ಗ್ರಾಮೀಣ ಭಾಗದಲ್ಲಿಯೇ ಕ್ರಾಸ್ಕಂಟ್ರಿ ಓಟದಲ್ಲಿ ಆಸಕ್ತಿ ಹೊಂದಿದ್ದ ಅವರು ಸ್ನೇಹಿತರ ಒತ್ತಾಯದ ಮೇರೆಗೆ ಮತ್ತೆ ಓಡಲು ಶುರು ಮಾಡಿದರು. ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರವೇಶ ಪಡೆದ ನಂತರ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಕೆ. ಸಾರವಾನ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.