‘ನಗರದ ಪ್ರಮುಖ ಕೈಗಾರಿಕೆಗಳು, ವಾಣಿಜ್ಯೋದ್ಯಮಿಗಳು ತಮ್ಮ ಸಿಎಸ್ಆರ್ ಅನುದಾನದಡಿ ಮೃಗಾಲಯಗಳಿಗೆ ನೆರವು ನೀಡಬಹುದು. ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಬಹುದು. ಈ ಮೃಗಾಲಯದಲ್ಲಿ ಹುಲಿ, ಸಿಂಹ, ಚಿರತೆ, ಹೈನಾ, ಕರಡಿ ಸೇರಿದಂತೆ ಸೇರಿದಂತೆ 172 ಪ್ರಾಣಿಗಳಿವೆ. ದಾನಿಗಳು, ಪ್ರಾಣಿಪ್ರಿಯರು ತಮ್ಮ ಕೈಲಾದ ಮಟ್ಟಿಗೆ ಆರ್ಥಿಕ ಸಹಾಯ ಮಾಡಬಹುದು. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಎ ಅಡಿ ದಾನಿಗಳಿಗೆ ಆದಾಯ ತೆರಿಗೆ ವಿನಾಯಿತಿ ಇರುತ್ತದೆ’ ಎಂದರು.