‘ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯು, ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ರಾಷ್ಟ್ರೀಯ ಹೆದ್ದಾರಿಯ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವ ಕಾರ್ಯ ಪ್ರಾರಂಭವಾಗಿದೆ. ಈ ಮಾರ್ಗವು ಶಿರಸಿ ನಗರದೊಳಗೆ ಹಾದು ಹೋದರೆ, ರಸ್ತೆಯ ಎರಡು ಬದಿಯಲ್ಲಿರುವ ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ, ದೇವಸ್ಥಾನ, ಚರ್ಚ್ಗಳನ್ನು ತೆರವುಗೊಳಿಸುವುದು ಅನಿವಾರ್ಯವಾಗುತ್ತದೆ. ಇದರಿಂದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಘಾಸಿ ಆಗುವುದಲ್ಲದೇ, ಶೈಕ್ಷಣಿಕ ಸಂಸ್ಥೆಗಳಿಗೂ ಧಕ್ಕೆಯಾಗುತ್ತದೆ. ಅನೇಕ ಸರ್ಕಾರಿ ಕಚೇರಿಗಳ ಕಟ್ಟಡ ಕೂಡ ತೆರವುಗೊಳಿಸಬೇಕಾಗುವುದರಿಂದ, ನಗರ ಹೊರವಲಯದಲ್ಲಿ ಬೈಪಾಸ್ ರಸ್ತೆ ಮೂಲಕ ಈ ಹೆದ್ದಾರಿಯನ್ನು ಕೊಂಡೊಯ್ಯಲು ಸರ್ವೆ ನಡೆಸಬೇಕು’ ಎಂದು ಆಗ್ರಹಿಸಿದರು.