<p><strong>ರಾಮದುರ್ಗ:</strong> ‘ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವುದರಿಂದ ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು‘ ಎಂದು ಸಿಪಿಐ ವಿನಾಯಕ ಬಡಿಗೇರ ಹೇಳಿದರು.</p>.<p>ಕಟಕೋಳದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನಡೆದ ಗ್ರಾಮ ದೇವಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 15 ವರ್ಷಗಳ ನಂತರ ಮೇ 27 ರಿಂದ ಜಾತ್ರೆ ನಡೆಯಲಿದ್ದು, ಉತ್ತಮ ವಿಚಾರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಕು’ ಎಂದರು. </p>.<p>ಜಾತ್ರೆಯ ಸಂದರ್ಭದಲ್ಲಿ ಸುಮಾರು 50 ಜನ ಸ್ವಯಂ ಸೇವಕರನ್ನು ನೇಮಿಸಿಕೊಂಡು ಪೊಲೀಸರೊಂದಿಗೆ ಸಹಕಾರಿಸಬೇಕು. ಎಲ್ಲ ಸಮಾಜದವರು ಸೌಹಾರ್ದತೆಯಿಂದ ಜಾತ್ರೆ ಆಚರಿಸಿ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಬೇಕು’ ಎಂದರು. </p>.<p>ಕಟಕೋಳ ಪಿಎಸ್ಐ ಬಸವರಾಜ ಕೊಣ್ಣೂರೆ ಮಾತನಾಡಿ, ಜಾತ್ರೆಯ ಸಮಯದಲ್ಲಿ ಪ್ರಾಣಿವಧೆ ಮಾಡಬಾರದು. ಸಾರ್ವಜನಿಕರಿಗೆ, ಮಹಿಳೆಯರಿಗೆ ಭಂಡಾರ ಎರಚಬಾರದು. ಡಿಜೆ ಮೆರವಣಿಗೆ ಮಾಡಕೂಡದು. ಅನುಮತಿ ಇಲ್ಲದೆ ಕಾರ್ಯಕ್ರಮ ಧ್ವನಿ ವರ್ಧಕ ಹಚ್ಚಬಾರದು. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದೂ ಸೂಚಿಸಿದರು. </p>.<p>ಸಾರ್ವಜನಿಕರು ಸಲಹೆ ನೀಡಿದರು. ಕಟಕೋಳ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪಾರ್ವತಿ ಪಾಟೋಳಿ, ಬಿ.ಎ.ದೇಸಾಯಿ, ರಾವಸಾಹೇಬಗೌಡ ಪೋಲಿಸಪಾಟೀಲ, ಅಪರಾಧ ವಿಭಾಗದ ಪಿಎಸ್ಐ ಎಂ.ಎಸ್.ಬಡಿಗೇರ, ಪಿಡಿಒ ಎಂ.ಬಿ.ಬೈಲವಾಡ, ಹೆಸ್ಕಾಂ ಅಧಿಕಾರಿ ಶ್ರೀಕಾಂತ ಕಾಂಬಳೆ ಸೇರಿದಂತೆ ಗ್ರಾಮದ ಪ್ರಮುಖರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ‘ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವುದರಿಂದ ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು‘ ಎಂದು ಸಿಪಿಐ ವಿನಾಯಕ ಬಡಿಗೇರ ಹೇಳಿದರು.</p>.<p>ಕಟಕೋಳದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನಡೆದ ಗ್ರಾಮ ದೇವಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 15 ವರ್ಷಗಳ ನಂತರ ಮೇ 27 ರಿಂದ ಜಾತ್ರೆ ನಡೆಯಲಿದ್ದು, ಉತ್ತಮ ವಿಚಾರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಕು’ ಎಂದರು. </p>.<p>ಜಾತ್ರೆಯ ಸಂದರ್ಭದಲ್ಲಿ ಸುಮಾರು 50 ಜನ ಸ್ವಯಂ ಸೇವಕರನ್ನು ನೇಮಿಸಿಕೊಂಡು ಪೊಲೀಸರೊಂದಿಗೆ ಸಹಕಾರಿಸಬೇಕು. ಎಲ್ಲ ಸಮಾಜದವರು ಸೌಹಾರ್ದತೆಯಿಂದ ಜಾತ್ರೆ ಆಚರಿಸಿ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಬೇಕು’ ಎಂದರು. </p>.<p>ಕಟಕೋಳ ಪಿಎಸ್ಐ ಬಸವರಾಜ ಕೊಣ್ಣೂರೆ ಮಾತನಾಡಿ, ಜಾತ್ರೆಯ ಸಮಯದಲ್ಲಿ ಪ್ರಾಣಿವಧೆ ಮಾಡಬಾರದು. ಸಾರ್ವಜನಿಕರಿಗೆ, ಮಹಿಳೆಯರಿಗೆ ಭಂಡಾರ ಎರಚಬಾರದು. ಡಿಜೆ ಮೆರವಣಿಗೆ ಮಾಡಕೂಡದು. ಅನುಮತಿ ಇಲ್ಲದೆ ಕಾರ್ಯಕ್ರಮ ಧ್ವನಿ ವರ್ಧಕ ಹಚ್ಚಬಾರದು. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದೂ ಸೂಚಿಸಿದರು. </p>.<p>ಸಾರ್ವಜನಿಕರು ಸಲಹೆ ನೀಡಿದರು. ಕಟಕೋಳ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪಾರ್ವತಿ ಪಾಟೋಳಿ, ಬಿ.ಎ.ದೇಸಾಯಿ, ರಾವಸಾಹೇಬಗೌಡ ಪೋಲಿಸಪಾಟೀಲ, ಅಪರಾಧ ವಿಭಾಗದ ಪಿಎಸ್ಐ ಎಂ.ಎಸ್.ಬಡಿಗೇರ, ಪಿಡಿಒ ಎಂ.ಬಿ.ಬೈಲವಾಡ, ಹೆಸ್ಕಾಂ ಅಧಿಕಾರಿ ಶ್ರೀಕಾಂತ ಕಾಂಬಳೆ ಸೇರಿದಂತೆ ಗ್ರಾಮದ ಪ್ರಮುಖರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>