<p><strong>ಬೆಳಗಾವಿ</strong>: ‘ಇಲ್ಲಿ ಡಿ.8ರಿಂದ 19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ, ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕದ ವಿಷಯಗಳ ಚರ್ಚೆಗೆ ಅವಕಾಶ ನೀಡಲಾಗುವುದು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.</p>.<p>ಸುವರ್ಣ ವಿಧಾನಸೌಧದಲ್ಲಿ ಬುಧವಾರ ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಅವರು, ‘ಈ ಭಾಗದ ಜಿಲ್ಲೆಗಳ ಶಾಸಕರು ಸಮಸ್ಯೆಗಳ ಕುರಿತು ಧ್ವನಿ ಎತ್ತಿ, ಸರ್ಕಾರದಿಂದ ಉತ್ತರ ಪಡೆಯಲು ಪ್ರಯತ್ನಿಸಬೇಕು. ಇದು ಅವರ ಜವಾಬ್ದಾರಿಯೂ ಹೌದು’ ಎಂದು ಹೇಳಿದರು. </p>.<p>‘ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಸಿದ್ಧತೆ ಆಗಿದೆ. ನಿತ್ಯ 500 ವಿದ್ಯಾರ್ಥಿಗಳಿಗೆ ಕಲಾಪ ವೀಕ್ಷಣೆಗೆ ಅವಕಾಶ ಇರುತ್ತದೆ. ಕಲಾಪ ವೀಕ್ಷಣೆ ಅವಧಿಯನ್ನು 20 ನಿಮಿಷಕ್ಕೆ ಹೆಚ್ಚಿಸಲಾಗಿದೆ. ವೀಕ್ಷಣೆಗೆ ಬರುವ ವಿದ್ಯಾರ್ಥಿಗಳ ಭೇಟಿ ಕುರಿತು ವಾರ ಮುಂಚೆಯೇ ತಿಳಿಸಬೇಕು’ ಎಂದು ಅವರು ತಿಳಿಸಿದರು.</p>.<p>‘ಸಂಸದೀಯ ವ್ಯವಸ್ಥೆ ಕುರಿತು ಅರಿವು ಮೂಡಿಸಲು ವಿವಿಧ ವಿ.ವಿಗಳ ಆಯ್ದ 30 ವಿದ್ಯಾರ್ಥಿ<br>ಗಳಿಗೆ ಇಡೀ ದಿನ ಕಲಾಪ ವೀಕ್ಷಣೆಗೆ ಅವಕಾಶ ಕಲ್ಪಿಸಲಿದ್ದೇವೆ. ಕಾರ್ಮಿಕರು, ಕ್ರೀಡಾಪಟುಗಳು, ಪೌರ ಕಾರ್ಮಿಕರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು<br>ಸೇರಿ ವಿವಿಧ ವರ್ಗದವರಿಗೂ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. </p>.<p>ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ವಿಷಯ ಪ್ರಸ್ತಾಪಿಸುವುದಾಗಿ ಶಾಸಕ ಭರಮಗೌಡ (ರಾಜು) ಕಾಗೆ ಹೇಳಿಕೆ ಕುರಿತು ‘ಅದು ತಪ್ಪು. ಅಂಥ ಬೇಡಿಕೆಗಳನ್ನು ಮಂಡಿಸಬಾರದು. ಮಂಡಿಸಿದರೆ ಈ ವಿಷಯವನ್ನು ಕಲಾಪ ಸಲಹಾ ಸಮಿತಿ (ಬಿಎಸಿ) ನಿರ್ಧರಿಸುತ್ತದೆ’ ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಇದ್ದರು.</p>.<div><blockquote>ಮುಂಚಿತವಾಗಿಯೇ ಚರ್ಚಿಸಿ ಈ ಸಲವೂ ಪ್ರತಿಭಟನೆ ಸಂಖ್ಯೆ ತಗ್ಗಿಸಲಾಗುವುದು. ಪ್ರತಿಭಟನೆ ಸ್ಥಳಗಳಿಗೆ ಸಚಿವರು ಹೋಗಿ ಅಹವಾಲು ಆಲಿಸುವ ವ್ಯವಸ್ಥೆ ಮಾಡಲಾಗುವುದು </blockquote><span class="attribution">ಬಸವರಾಜ ಹೊರಟ್ಟಿ ಸಭಾಪತಿ ವಿಧಾನ ಪರಿಷತ್ತು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಲ್ಲಿ ಡಿ.8ರಿಂದ 19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ, ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕದ ವಿಷಯಗಳ ಚರ್ಚೆಗೆ ಅವಕಾಶ ನೀಡಲಾಗುವುದು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.</p>.<p>ಸುವರ್ಣ ವಿಧಾನಸೌಧದಲ್ಲಿ ಬುಧವಾರ ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಅವರು, ‘ಈ ಭಾಗದ ಜಿಲ್ಲೆಗಳ ಶಾಸಕರು ಸಮಸ್ಯೆಗಳ ಕುರಿತು ಧ್ವನಿ ಎತ್ತಿ, ಸರ್ಕಾರದಿಂದ ಉತ್ತರ ಪಡೆಯಲು ಪ್ರಯತ್ನಿಸಬೇಕು. ಇದು ಅವರ ಜವಾಬ್ದಾರಿಯೂ ಹೌದು’ ಎಂದು ಹೇಳಿದರು. </p>.<p>‘ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಸಿದ್ಧತೆ ಆಗಿದೆ. ನಿತ್ಯ 500 ವಿದ್ಯಾರ್ಥಿಗಳಿಗೆ ಕಲಾಪ ವೀಕ್ಷಣೆಗೆ ಅವಕಾಶ ಇರುತ್ತದೆ. ಕಲಾಪ ವೀಕ್ಷಣೆ ಅವಧಿಯನ್ನು 20 ನಿಮಿಷಕ್ಕೆ ಹೆಚ್ಚಿಸಲಾಗಿದೆ. ವೀಕ್ಷಣೆಗೆ ಬರುವ ವಿದ್ಯಾರ್ಥಿಗಳ ಭೇಟಿ ಕುರಿತು ವಾರ ಮುಂಚೆಯೇ ತಿಳಿಸಬೇಕು’ ಎಂದು ಅವರು ತಿಳಿಸಿದರು.</p>.<p>‘ಸಂಸದೀಯ ವ್ಯವಸ್ಥೆ ಕುರಿತು ಅರಿವು ಮೂಡಿಸಲು ವಿವಿಧ ವಿ.ವಿಗಳ ಆಯ್ದ 30 ವಿದ್ಯಾರ್ಥಿ<br>ಗಳಿಗೆ ಇಡೀ ದಿನ ಕಲಾಪ ವೀಕ್ಷಣೆಗೆ ಅವಕಾಶ ಕಲ್ಪಿಸಲಿದ್ದೇವೆ. ಕಾರ್ಮಿಕರು, ಕ್ರೀಡಾಪಟುಗಳು, ಪೌರ ಕಾರ್ಮಿಕರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು<br>ಸೇರಿ ವಿವಿಧ ವರ್ಗದವರಿಗೂ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. </p>.<p>ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ವಿಷಯ ಪ್ರಸ್ತಾಪಿಸುವುದಾಗಿ ಶಾಸಕ ಭರಮಗೌಡ (ರಾಜು) ಕಾಗೆ ಹೇಳಿಕೆ ಕುರಿತು ‘ಅದು ತಪ್ಪು. ಅಂಥ ಬೇಡಿಕೆಗಳನ್ನು ಮಂಡಿಸಬಾರದು. ಮಂಡಿಸಿದರೆ ಈ ವಿಷಯವನ್ನು ಕಲಾಪ ಸಲಹಾ ಸಮಿತಿ (ಬಿಎಸಿ) ನಿರ್ಧರಿಸುತ್ತದೆ’ ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಇದ್ದರು.</p>.<div><blockquote>ಮುಂಚಿತವಾಗಿಯೇ ಚರ್ಚಿಸಿ ಈ ಸಲವೂ ಪ್ರತಿಭಟನೆ ಸಂಖ್ಯೆ ತಗ್ಗಿಸಲಾಗುವುದು. ಪ್ರತಿಭಟನೆ ಸ್ಥಳಗಳಿಗೆ ಸಚಿವರು ಹೋಗಿ ಅಹವಾಲು ಆಲಿಸುವ ವ್ಯವಸ್ಥೆ ಮಾಡಲಾಗುವುದು </blockquote><span class="attribution">ಬಸವರಾಜ ಹೊರಟ್ಟಿ ಸಭಾಪತಿ ವಿಧಾನ ಪರಿಷತ್ತು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>