ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಚನ ಪುಸ್ತಕ ಮಳಿಗೆ ಉದ್ಘಾಟನೆ

Last Updated 6 ಸೆಪ್ಟೆಂಬರ್ 2020, 12:00 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನ ಗೇಟ್‌ ನಂ.3ರ ಬಳಿಯ ವಚನ ಅಧ್ಯಯನ ಕೇಂದ್ರದಲ್ಲಿ ಆರಂಭಿಸಿರುವ ಪುಸ್ತಕ ಮಾರಾಟ ಮಳಿಗೆಯನ್ನು ಭಾನುವಾರ ಉದ್ಘಾಟಿಸಲಾಯಿತು.

ಡಂಬಳ-ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಟೇಪ್‌ ಕತ್ತರಿಸಿದರು. ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್‌ಜಿಬಿಐಟಿ ಪ್ರಾಂಶುಪಾಲ ಪ್ರೊ.ಸಿದ್ರಾಮಪ್ಪ ವಿ.ಇಟ್ಟಿ ಇದ್ದರು.

‘ಮಳಿಗೆಯಲ್ಲಿ ವಚನ ಸಾಹಿತ್ಯ, ಧರ್ಮ, ತತ್ತ್ವಶಾಸ್ತ್ರ, ಅಧ್ಯಾತ್ಮ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಮೌಲಿಕ ಗ್ರಂಥಗಳು, ಪೂಜಾ ಸಾಮಗ್ರಿಗಳು, ವಿಭೂತಿ, ಲಿಂಗಗಳು, ರುದ್ರಾಕ್ಷಿಗಳು, ಶರಣರ ಫೋಟೊಗಳು ಮಾರಾಟಕ್ಕೆ ಲಭ್ಯ ಇವೆ. ವಚನ ಸಾಹಿತ್ಯ ಅಧ್ಯಯನ ಮಾಡುವವರಿಗೆ ಇವು ಬಹಳ ಅನುಕೂಲವಾಗಲಿದೆ’ ಎಂದು ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT