<p>ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠ, ಬೆಳಗಾವಿ</p>.<p>–––––</p>.<p>ಬಂದ ಯೋನಿಯನರಿದು ಸಲಹೆನ್ನ ತಂದೆ!</p>.<p>ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು;</p>.<p>ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು</p>.<p>ಎನ್ನ ತಂದೆ ಕೂಡಲಸಂಗಮದೇವಾ ಇವ ಮಾಣಿಸು ನಿಮ್ಮ ಧರ್ಮ!</p>.<p>ಎಂಬತ್ನಾಲ್ಕು ಜೀವರಾಶಿಗಳನ್ನು ಸುತ್ತಿ ಬರುವ ಈ ಶರೀರವು; ಅರಿವು, ಆಚಾರದ ಕುರಿತು ಚಿಂತಿಸದೆ ಮನಸ್ಸಿನ ಚಿತ್ತ ಚಾಂಚಲ್ಯಕ್ಕೆ ಒಳಗಾಗಿ ತನ್ನ ಗುರಿಯನ್ನೇ ಮರೆತು ಬಿಟ್ಟಿದೆ. ಅದಕ್ಕಾಗಿಯೇ ಬಸವಣ್ಣನವರು ನಾನು ಬಂದ ರೀತಿಯನ್ನಾದರೂ ನೋಡಿ ನನ್ನನ್ನು ಸಲಹು ತಂದೆ ಎಂದು ಈ ವಚನದ ಮೂಲಕ ಬೇಡಿಕೊಂಡಿದ್ದಾರೆ. ಮನಸ್ಸಿನ ಮಾತು ಕೇಳಿ ಗುರಿಯನ್ನು ತಪ್ಪುತ್ತಿದ್ದೇನೆ; ಬುದ್ಧಿಯು ಅದರ ಪ್ರಭಾವಕ್ಕೊಳಗಾಗಿದೆ ಎಂದಿದ್ದಾರೆ. ಮನುಷ್ಯನಿಗೆ ಮನಸ್ಸು ಮತ್ತು ಬುದ್ಧಿ ಬಹಳ ಮುಖ್ಯವಾದವು. ಅವುಗಳನ್ನು ಹಿಡಿತದಲ್ಲಿಟ್ಟುಕೊಂಡವರು ಶ್ರೇಷ್ಠರಾಗುತ್ತಾರೆ. ಭಾಗಶಃ ಜನರು ಇವುಗಳ ಹಿಡಿತದಲ್ಲಿರುವುದರಿಂದ ಭಗವಂತನ ಆರಾಧನೆ ಸಾಧ್ಯವಾಗುವುದಿಲ್ಲ. ಆದ್ದರಿಂದಲೇ ಬಸವಣ್ಣನವರು ಇವುಗಳ ತಪ್ಪುಗಳನ್ನು ಮನ್ನಿಸಿ, ನನ್ನನ್ನು ಕಾಪಾಡು ಎಂದು ಪ್ರಾರ್ಥಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠ, ಬೆಳಗಾವಿ</p>.<p>–––––</p>.<p>ಬಂದ ಯೋನಿಯನರಿದು ಸಲಹೆನ್ನ ತಂದೆ!</p>.<p>ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು;</p>.<p>ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು</p>.<p>ಎನ್ನ ತಂದೆ ಕೂಡಲಸಂಗಮದೇವಾ ಇವ ಮಾಣಿಸು ನಿಮ್ಮ ಧರ್ಮ!</p>.<p>ಎಂಬತ್ನಾಲ್ಕು ಜೀವರಾಶಿಗಳನ್ನು ಸುತ್ತಿ ಬರುವ ಈ ಶರೀರವು; ಅರಿವು, ಆಚಾರದ ಕುರಿತು ಚಿಂತಿಸದೆ ಮನಸ್ಸಿನ ಚಿತ್ತ ಚಾಂಚಲ್ಯಕ್ಕೆ ಒಳಗಾಗಿ ತನ್ನ ಗುರಿಯನ್ನೇ ಮರೆತು ಬಿಟ್ಟಿದೆ. ಅದಕ್ಕಾಗಿಯೇ ಬಸವಣ್ಣನವರು ನಾನು ಬಂದ ರೀತಿಯನ್ನಾದರೂ ನೋಡಿ ನನ್ನನ್ನು ಸಲಹು ತಂದೆ ಎಂದು ಈ ವಚನದ ಮೂಲಕ ಬೇಡಿಕೊಂಡಿದ್ದಾರೆ. ಮನಸ್ಸಿನ ಮಾತು ಕೇಳಿ ಗುರಿಯನ್ನು ತಪ್ಪುತ್ತಿದ್ದೇನೆ; ಬುದ್ಧಿಯು ಅದರ ಪ್ರಭಾವಕ್ಕೊಳಗಾಗಿದೆ ಎಂದಿದ್ದಾರೆ. ಮನುಷ್ಯನಿಗೆ ಮನಸ್ಸು ಮತ್ತು ಬುದ್ಧಿ ಬಹಳ ಮುಖ್ಯವಾದವು. ಅವುಗಳನ್ನು ಹಿಡಿತದಲ್ಲಿಟ್ಟುಕೊಂಡವರು ಶ್ರೇಷ್ಠರಾಗುತ್ತಾರೆ. ಭಾಗಶಃ ಜನರು ಇವುಗಳ ಹಿಡಿತದಲ್ಲಿರುವುದರಿಂದ ಭಗವಂತನ ಆರಾಧನೆ ಸಾಧ್ಯವಾಗುವುದಿಲ್ಲ. ಆದ್ದರಿಂದಲೇ ಬಸವಣ್ಣನವರು ಇವುಗಳ ತಪ್ಪುಗಳನ್ನು ಮನ್ನಿಸಿ, ನನ್ನನ್ನು ಕಾಪಾಡು ಎಂದು ಪ್ರಾರ್ಥಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>