ಬೆಳಗಾವಿ: ‘ಪರಿವಾರ ಮತ್ತು ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂವಿಧಾನದ (ಪರಿಶಿಷ್ಟ ಪಂಗಡ) ಆದೇಶ (2ನೇ ತಿದ್ದುಪಡಿ) ಮಸೂದೆ ಮಂಡನೆ ನಂತರ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರು, ‘ಉತ್ತರ ಕರ್ನಾಟಕದ ಇನ್ನೂ ಕೆಲವು ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಹೇಳಿರುವುದು ಖಂಡನೀಯ’’ ಎಂದು ವಾಲ್ಮೀಕಿ ನಾಯಕ ಸಮಾಜ ಜಿಲ್ಲಾ ಘಟಕ ತಿಳಿಸಿದೆ.