ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಮಾಜ ಸಂಘಟನೆಗಾಗಿ ಪ್ರವಾಸದಲ್ಲಿದ್ದೇನೆ. ಬಿ. ಶ್ರೀರಾಮುಲು ಖಾತೆ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ. ಆದರೆ, ಬಿಜೆಪಿ ಸರ್ಕಾರ ವಾಲ್ಮೀಕಿ ಸಮಾಜ ನಿರ್ಲಕ್ಷಿಸುತ್ತಿರುವುದು ಸ್ಪಷ್ಟವಾಗಿದೆ. ರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ, ಬೇರೆಯವರಿಗೆ ಅವಕಾಶ ಕೊಟ್ಟರು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.