ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ. ಪ್ರಕರಣ: ಯುವತಿ ಕುಟುಂಬ ಭೇಟಿಯಾದ ವಾಲ್ಮೀಕಿ ಶ್ರೀ

Last Updated 29 ಮಾರ್ಚ್ 2021, 15:56 IST
ಅಕ್ಷರ ಗಾತ್ರ

ಬೆಳಗಾವಿ: ಗೋಕಾಕಬಿಜೆಪಿ ಶಾಸಕರಮೇಶಜಾರಕಿಹೊಳಿವಿರುದ್ಧದಸಿ.ಡಿ.ಪ್ರಕರಣದ ಯುವತಿಯ ಪೋಷಕರನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸೋಮವಾರ ರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನೋವಿನಲ್ಲಿರುವ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದೇನೆ. ನಮ್ಮ ಸಮಾಜದ ಹೆಣ್ಣು ಮಗಳ ಕುಟುಂಬ ಧೈರ್ಯವಾಗಿ ಇರಬೇಕು. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರವಾಗಿದ್ದು, ಸರಿಯಾಗಿ ತನಿಖೆ ಆಗಬೇಕು’ ಎಂದು ಒತ್ತಾಯಿಸಿದರು.

‘ಸಮಾಜದ ನಾಯಕರನ್ನು ತುಳಿಯುವ ಪ್ರಯತ್ನ ಮೊದಲಿನಿಂದಲೂ ನಡೆದಿದೆ. ಮಗಳು ಒತ್ತಡದಲ್ಲಿದ್ದಾಳೆ ಎಂದು ತಂದೆ- ತಾಯಿ ಹೇಳಿದ್ದಾರೆ. ನೊಂದಿರುವ ಈ ಕುಟುಂಬದ ಪರವಾಗಿ ಸಮಾಜ ಹಾಗೂ ಪೀಠ ಇರುತ್ತದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT