<p><strong>ಘಟಪ್ರಭಾ</strong>: ಪುಣೆ-ಹುಬ್ಬಳ್ಳಿ ವಂದೇ ಭಾರತ್ಎಕ್ಸ್ಪ್ರೆಸ್ ರೈಲು ಜನವರಿ 2 ರಿಂದ ಸ್ಥಳೀಯ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.</p>.<p>‘ಈ ರೈಲು ಪುಣೆಯಿಂದ ಮಧ್ಯಾಹ್ನ 2.15ಕ್ಕೆ ಹೊರಟು ರಾತ್ರಿ 7.38ಕ್ಕೆ ಘಟಪ್ರಭಾಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ನಿಲ್ದಾಣದಲ್ಲಿ ಸಂಜೆ 7 ಗಂಟೆಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇಲ್ಲಿಯ ನಾಗರಿಕರೆಲ್ಲರೂ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>3ರಂದು ಹುಬ್ಬಳಿ ನಿಲ್ದಾಣದಿಂದ ಬೆಳಿಗ್ಗೆ 5.15ರಿಂದ ಹೊರಟು 7.23ಕ್ಕೆ ಇಲ್ಲಿಗೆ ಬರಲಿಲಿದೆ. ಈ ರೈಲು ವಾರದಲ್ಲಿ ಮೂರು ಬಾರಿ ಹುಬ್ಬಳ್ಳಿಯಿಂದ (ಬುಧವಾರ, ಶುಕ್ರವಾರ ಹಾಗೂ ಭಾನುವಾರ) ಮತ್ತು ಪುಣೆಯಿಂದ (ಗುರುವಾರ, ಶನಿವಾರ ಮತ್ತು ಸೋಮವಾರ) ಸಂಚರಿಸಲಿದ್ದು, ಘಟಪ್ರಭಾದಲ್ಲಿ ೨ ನಿಮಿಷ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆ ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಘಟಪ್ರಭಾ</strong>: ಪುಣೆ-ಹುಬ್ಬಳ್ಳಿ ವಂದೇ ಭಾರತ್ಎಕ್ಸ್ಪ್ರೆಸ್ ರೈಲು ಜನವರಿ 2 ರಿಂದ ಸ್ಥಳೀಯ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.</p>.<p>‘ಈ ರೈಲು ಪುಣೆಯಿಂದ ಮಧ್ಯಾಹ್ನ 2.15ಕ್ಕೆ ಹೊರಟು ರಾತ್ರಿ 7.38ಕ್ಕೆ ಘಟಪ್ರಭಾಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ನಿಲ್ದಾಣದಲ್ಲಿ ಸಂಜೆ 7 ಗಂಟೆಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇಲ್ಲಿಯ ನಾಗರಿಕರೆಲ್ಲರೂ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>3ರಂದು ಹುಬ್ಬಳಿ ನಿಲ್ದಾಣದಿಂದ ಬೆಳಿಗ್ಗೆ 5.15ರಿಂದ ಹೊರಟು 7.23ಕ್ಕೆ ಇಲ್ಲಿಗೆ ಬರಲಿಲಿದೆ. ಈ ರೈಲು ವಾರದಲ್ಲಿ ಮೂರು ಬಾರಿ ಹುಬ್ಬಳ್ಳಿಯಿಂದ (ಬುಧವಾರ, ಶುಕ್ರವಾರ ಹಾಗೂ ಭಾನುವಾರ) ಮತ್ತು ಪುಣೆಯಿಂದ (ಗುರುವಾರ, ಶನಿವಾರ ಮತ್ತು ಸೋಮವಾರ) ಸಂಚರಿಸಲಿದ್ದು, ಘಟಪ್ರಭಾದಲ್ಲಿ ೨ ನಿಮಿಷ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆ ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>