‘ಮೈಕ್ರೊ ಫೈನಾನ್ಸ್ ಹಾಗೂ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಸಾಲ ಮನ್ನಾ ಮಾಡಬೇಕು. ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಉಚಿತವಾಗಿ ನೀಡಬೇಕು. ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಬ್ಬರಿಗೆ ವರ್ಷಕ್ಕೆ ನೀಡುವ ಕೆಲಸದ ದಿನಗಳನ್ನು 100ರಿಂದ 200ಕ್ಕೆ ವಿಸ್ತರಿಸಬೇಕು. ಕೂಲಿಯನ್ನು ₹ 600ಕ್ಕೆ ಹೆಚ್ಚಿಸಬೇಕು. ವಲಸೆ ಕಾರ್ಮಿಕರಿಗೆ ಆಹಾರ, ವಸತಿ, ಔಷಧಗಳನ್ನು ಒದಗಿಸಬೇಕು’ ಎಂಬಿತ್ಯಾದಿ ಬೇಡಿಕೆಗಳ ಪೋಸ್ಟರ್ಗಳನ್ನು ಕೃಷಿ ಕಾರ್ಮಿಕರು ಪ್ರದರ್ಶಿಸಿದರು.