<p><strong>ಬೆಳಗಾವಿ:</strong> ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿದ್ದ ತುಂತುರು ಮಳೆ ಮಂಗಳವಾರದಿಂದ ಬಿರುಸು ಪಡೆದಿದೆ. </p><p>ಬೆಳಗಾವಿಯಲ್ಲಿ ಸೋಮವಾರ ರಾತ್ರಿಯಿಂದ ಆರಂಭಗೊಂಡ ಧಾರಾಕಾರ ಮಳೆ ಮಂಗಳವಾರ ದಿನವಿಡೀ ಮುಂದುವರಿದಿದ್ದು, ಹಲವು ಅವಾಂತರ ಸೃಷ್ಟಿಸಿತು.</p><p>ಗಾಂಧಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ, ಜಿಲ್ಲಾಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಮತ್ತಿತರ ಮಾರ್ಗಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತು, ವಾಹನ ಸವಾರರು ಪರದಾಡಿದರು.</p><p>ಮರಾಠ ಕಾಲೊನಿಯಲ್ಲಿ ಮನೆಗೆ ನುಗ್ಗಿದ್ದ ನೀರು ಹೊರಹಾಕಲು ಜನರು ಪ್ರಯಾಸಪಟ್ಟರು. ಶಹಾಪುರ ಪೊಲೀಸ್ ಠಾಣೆ ಬಳಿ ಕೊಳಚೆ ನೀರು ರಸ್ತೆ ಮೇಲೆ ಹರಿಯಿತು.</p><p>ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಸ್ ತಂಗುದಾಣಕ್ಕೂ ನೀರು ನುಗ್ಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಶಾಲೆ ಆರಂಭವಾಗುವ ಮತ್ತು ಬಿಡುವ ಹೊತ್ತಿಗೆ ಬಿರುಸಿನ ಮಳೆಯಾದ ಕಾರಣ, ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು. </p><p>ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ–ವಹಿವಾಟಿಗೂ ತೊಡಕಾಯಿತು. ಜನಸಂದಣಿ ಎಂದಿಗಿಂತ ಕಡಿಮೆ ಇತ್ತು.</p><p>ಸತತ ಮಳೆಯಿಂದ ಶಾಹೂ ನಗರ, ಮರಾಠ ಕಾಲೊನಿ, ರಾಣಿ ಚನ್ನಮ್ಮ ನಗರ, ವಿಶ್ವೇಶ್ವರಯ್ಯ ನಗರ ಸೇರಿದಂತೆ ವಿವಿಧ ಬಡಾವಣೆಗಳ ರಸ್ತೆಗಳಲ್ಲಿ 10ಕ್ಕೂ ಅಧಿಕ ಮರ ಧರೆಗುರುಳಿ, ಸಂಚಾರಕ್ಕೆ ತೊಡಕಾಯಿತು. ಮಹಾನಗರ ಪಾಲಿಕೆ ಸಿಬ್ಬಂದಿ ಮರ ತೆರವುಗೊಳಿಸಿದರು.</p><p>ಪಾಲಿಕೆ ಆಯುಕ್ತೆ ಬಿ.ಶುಭ, ಪರಿಸರ ಎಂಜಿನಿಯರ್ ಹನುಮಂತ ಕಲಾದಗಿ ಹಾಗೂ ಪಾಲಿಕೆ ಸದಸ್ಯರು ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p><strong>ಶಾಲೆ, ಕಾಲೇಜಿಗೆ ರಜೆ 25ರಂದು</strong></p>.<p>ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜೂನ್ 25ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿದ್ದ ತುಂತುರು ಮಳೆ ಮಂಗಳವಾರದಿಂದ ಬಿರುಸು ಪಡೆದಿದೆ. </p><p>ಬೆಳಗಾವಿಯಲ್ಲಿ ಸೋಮವಾರ ರಾತ್ರಿಯಿಂದ ಆರಂಭಗೊಂಡ ಧಾರಾಕಾರ ಮಳೆ ಮಂಗಳವಾರ ದಿನವಿಡೀ ಮುಂದುವರಿದಿದ್ದು, ಹಲವು ಅವಾಂತರ ಸೃಷ್ಟಿಸಿತು.</p><p>ಗಾಂಧಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ, ಜಿಲ್ಲಾಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಮತ್ತಿತರ ಮಾರ್ಗಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತು, ವಾಹನ ಸವಾರರು ಪರದಾಡಿದರು.</p><p>ಮರಾಠ ಕಾಲೊನಿಯಲ್ಲಿ ಮನೆಗೆ ನುಗ್ಗಿದ್ದ ನೀರು ಹೊರಹಾಕಲು ಜನರು ಪ್ರಯಾಸಪಟ್ಟರು. ಶಹಾಪುರ ಪೊಲೀಸ್ ಠಾಣೆ ಬಳಿ ಕೊಳಚೆ ನೀರು ರಸ್ತೆ ಮೇಲೆ ಹರಿಯಿತು.</p><p>ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಸ್ ತಂಗುದಾಣಕ್ಕೂ ನೀರು ನುಗ್ಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಶಾಲೆ ಆರಂಭವಾಗುವ ಮತ್ತು ಬಿಡುವ ಹೊತ್ತಿಗೆ ಬಿರುಸಿನ ಮಳೆಯಾದ ಕಾರಣ, ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು. </p><p>ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ–ವಹಿವಾಟಿಗೂ ತೊಡಕಾಯಿತು. ಜನಸಂದಣಿ ಎಂದಿಗಿಂತ ಕಡಿಮೆ ಇತ್ತು.</p><p>ಸತತ ಮಳೆಯಿಂದ ಶಾಹೂ ನಗರ, ಮರಾಠ ಕಾಲೊನಿ, ರಾಣಿ ಚನ್ನಮ್ಮ ನಗರ, ವಿಶ್ವೇಶ್ವರಯ್ಯ ನಗರ ಸೇರಿದಂತೆ ವಿವಿಧ ಬಡಾವಣೆಗಳ ರಸ್ತೆಗಳಲ್ಲಿ 10ಕ್ಕೂ ಅಧಿಕ ಮರ ಧರೆಗುರುಳಿ, ಸಂಚಾರಕ್ಕೆ ತೊಡಕಾಯಿತು. ಮಹಾನಗರ ಪಾಲಿಕೆ ಸಿಬ್ಬಂದಿ ಮರ ತೆರವುಗೊಳಿಸಿದರು.</p><p>ಪಾಲಿಕೆ ಆಯುಕ್ತೆ ಬಿ.ಶುಭ, ಪರಿಸರ ಎಂಜಿನಿಯರ್ ಹನುಮಂತ ಕಲಾದಗಿ ಹಾಗೂ ಪಾಲಿಕೆ ಸದಸ್ಯರು ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p><strong>ಶಾಲೆ, ಕಾಲೇಜಿಗೆ ರಜೆ 25ರಂದು</strong></p>.<p>ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜೂನ್ 25ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>