<p><strong>ಬೆಳಗಾವಿ:</strong> ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಕ್ಕೆ ಒತ್ತಾಯಿಸಿ ಹಾಗೂ ಸ್ಮೃತಿ ಭವನ ನಿರ್ಮಾಣ ವಿರೋಧಿಸಿ, ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಎಂಇಎಸ್ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದರು. ಅವರನ್ನು ಪೊಲೀಸರು ತಡೆದಾಗ, ಪರಸ್ಪರರ ಮಧ್ಯೆ ವಾಗ್ವಾದ ನಡೆಯಿತು. ಪೊಲೀಸರ ವಿರುದ್ಧ ಘೋಷಣೆ ಕೂಗಿದ ವಾಟಾಳ್ ನಾಗರಾಜ್, ‘ನೀವು ಮರಾಠಿಗರ ಏಜೆಂಟರಾ’ ಎಂದು ಪ್ರಶ್ನಿಸಿದರು.</p><p>‘ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕೆಂದು ಹಲವು ವರ್ಷಗಳಿಂದ ಹೋರಾಡುತ್ತಿದ್ದೇವೆ. ಈ ಬಗ್ಗೆ ಭರವಸೆ ನೀಡಿದ್ದ ಯಾವುದೇ ನಾಯಕರು ಬೇಡಿಕೆ ಈಡೇರಿಸಿಲ್ಲ. ಇದನ್ನು ಖಂಡಿಸಿ ಏ.26ರಂದು ರಾಜ್ಯದಾದ್ಯಂತ ಕೋಟಿ ಈಡುಗಾಯಿ ಒಡೆಯುವ ಚಳವಳಿ ನಡೆಸಲಾಗುವುದು’ ಎಂದರು.</p><p>‘ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಮರಾಠಿಗರ ಗುಲಾಮರಾಗಿದ್ದಾರೆ. ಮತ್ತೊಂದೆಡೆ ಗಡಿ ಉಸ್ತುವಾರಿ ಸಚಿವರನ್ನೂ ನೇಮಿಸಿಲ್ಲ. ಹಾಗಾದರೆ ಸುಪ್ರೀಂ ಕೋರ್ಟ್ನಲ್ಲಿ ಇರುವ ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನೋಡಿಕೊಳ್ಳುವವರು ಯಾರು’ ಎಂದು ಪ್ರಶ್ನಿಸಿದರು.</p><p>‘ಬೆಳಗಾವಿ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಬೇಕು. ಈವರೆಗೆ ಬೆಳಗಾವಿಗೆ ಏನೇನು ಕೊಡುಗೆ ನೀಡಿದ್ದೀರಿ ಎಂದು ಶ್ವೇತಪತ್ರ ಹೊರಡಿಸಬೇಕು’ ಎಂದು ಸವಾಲು ಹಾಕಿದರು.</p><p>‘ಬೆಳಗಾವಿಯಲ್ಲಿ ಸ್ಮೃತಿ ಭವನ ನಿರ್ಮಾಣಕ್ಕೆ ಎಂಇಎಸ್ನವರಿಗೆ ಯಾವುದೇ ಕಾರಣಕ್ಕೂ ಅನುಮತಿ ಕೊಡಬಾರದು. ಒಂದುವೇಳೆ ಕೊಟ್ಟರೆ ರಾಜ್ಯದಲ್ಲಿ ಕ್ರಾಂತಿಯೇ ಆಗುತ್ತದೆ ಆಗುತ್ತದೆ. ಎಂಇಎಸ್ನವರು ಕರ್ನಾಟಕವೆಂದರೆ ಪಾಕಿಸ್ತಾನ್ ಎಂದು ತಿಳಿದಿದ್ದಾರೆ. ಅವರನ್ನು ಗಡೀಪಾರು ಮಾಡಬೇಕು’ ಎಂದು ಆಗ್ರಹಿಸಿದರು.</p><p>‘ಮಹಾರಾಷ್ಟ್ರದ ಕೊಯ್ನಾ, ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದು ಸುಮ್ಮನಾದರೆ ಸಾಲದು. ಮಹಾರಾಷ್ಟ್ರ ಸಿ.ಎಂ ಭೇಟಿಯಾಗಿ ಮಾತುಕತೆ ನಡೆಸಿ ನೀರು ಬಿಡಿಸಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎನ್ನುವ ಮೌಢ್ಯ ಕೆಲವರಲ್ಲಿದೆ. ಹಾಗಾಗಿ ಮಹದೇಶ್ವರ ಬೆಟ್ಟದ ಬದಲಿಗೆ, ಚಾಮರಾಜನಗರದಲ್ಲಿ ಸಂಪುಟ ಸಭೆ ಮಾಡಬೇಕಿತ್ತು. ಆದರೆ, ಸಿದ್ದರಾಮಯ್ಯ ಮೌಢ್ಯಕ್ಕೆ ಮತ್ತೆ ಬೆಲೆ ಕೊಟ್ಟಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಕ್ಕೆ ಒತ್ತಾಯಿಸಿ ಹಾಗೂ ಸ್ಮೃತಿ ಭವನ ನಿರ್ಮಾಣ ವಿರೋಧಿಸಿ, ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಎಂಇಎಸ್ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದರು. ಅವರನ್ನು ಪೊಲೀಸರು ತಡೆದಾಗ, ಪರಸ್ಪರರ ಮಧ್ಯೆ ವಾಗ್ವಾದ ನಡೆಯಿತು. ಪೊಲೀಸರ ವಿರುದ್ಧ ಘೋಷಣೆ ಕೂಗಿದ ವಾಟಾಳ್ ನಾಗರಾಜ್, ‘ನೀವು ಮರಾಠಿಗರ ಏಜೆಂಟರಾ’ ಎಂದು ಪ್ರಶ್ನಿಸಿದರು.</p><p>‘ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕೆಂದು ಹಲವು ವರ್ಷಗಳಿಂದ ಹೋರಾಡುತ್ತಿದ್ದೇವೆ. ಈ ಬಗ್ಗೆ ಭರವಸೆ ನೀಡಿದ್ದ ಯಾವುದೇ ನಾಯಕರು ಬೇಡಿಕೆ ಈಡೇರಿಸಿಲ್ಲ. ಇದನ್ನು ಖಂಡಿಸಿ ಏ.26ರಂದು ರಾಜ್ಯದಾದ್ಯಂತ ಕೋಟಿ ಈಡುಗಾಯಿ ಒಡೆಯುವ ಚಳವಳಿ ನಡೆಸಲಾಗುವುದು’ ಎಂದರು.</p><p>‘ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಮರಾಠಿಗರ ಗುಲಾಮರಾಗಿದ್ದಾರೆ. ಮತ್ತೊಂದೆಡೆ ಗಡಿ ಉಸ್ತುವಾರಿ ಸಚಿವರನ್ನೂ ನೇಮಿಸಿಲ್ಲ. ಹಾಗಾದರೆ ಸುಪ್ರೀಂ ಕೋರ್ಟ್ನಲ್ಲಿ ಇರುವ ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನೋಡಿಕೊಳ್ಳುವವರು ಯಾರು’ ಎಂದು ಪ್ರಶ್ನಿಸಿದರು.</p><p>‘ಬೆಳಗಾವಿ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಬೇಕು. ಈವರೆಗೆ ಬೆಳಗಾವಿಗೆ ಏನೇನು ಕೊಡುಗೆ ನೀಡಿದ್ದೀರಿ ಎಂದು ಶ್ವೇತಪತ್ರ ಹೊರಡಿಸಬೇಕು’ ಎಂದು ಸವಾಲು ಹಾಕಿದರು.</p><p>‘ಬೆಳಗಾವಿಯಲ್ಲಿ ಸ್ಮೃತಿ ಭವನ ನಿರ್ಮಾಣಕ್ಕೆ ಎಂಇಎಸ್ನವರಿಗೆ ಯಾವುದೇ ಕಾರಣಕ್ಕೂ ಅನುಮತಿ ಕೊಡಬಾರದು. ಒಂದುವೇಳೆ ಕೊಟ್ಟರೆ ರಾಜ್ಯದಲ್ಲಿ ಕ್ರಾಂತಿಯೇ ಆಗುತ್ತದೆ ಆಗುತ್ತದೆ. ಎಂಇಎಸ್ನವರು ಕರ್ನಾಟಕವೆಂದರೆ ಪಾಕಿಸ್ತಾನ್ ಎಂದು ತಿಳಿದಿದ್ದಾರೆ. ಅವರನ್ನು ಗಡೀಪಾರು ಮಾಡಬೇಕು’ ಎಂದು ಆಗ್ರಹಿಸಿದರು.</p><p>‘ಮಹಾರಾಷ್ಟ್ರದ ಕೊಯ್ನಾ, ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದು ಸುಮ್ಮನಾದರೆ ಸಾಲದು. ಮಹಾರಾಷ್ಟ್ರ ಸಿ.ಎಂ ಭೇಟಿಯಾಗಿ ಮಾತುಕತೆ ನಡೆಸಿ ನೀರು ಬಿಡಿಸಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎನ್ನುವ ಮೌಢ್ಯ ಕೆಲವರಲ್ಲಿದೆ. ಹಾಗಾಗಿ ಮಹದೇಶ್ವರ ಬೆಟ್ಟದ ಬದಲಿಗೆ, ಚಾಮರಾಜನಗರದಲ್ಲಿ ಸಂಪುಟ ಸಭೆ ಮಾಡಬೇಕಿತ್ತು. ಆದರೆ, ಸಿದ್ದರಾಮಯ್ಯ ಮೌಢ್ಯಕ್ಕೆ ಮತ್ತೆ ಬೆಲೆ ಕೊಟ್ಟಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>