ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಭದ್ರೇಶ್ವರ ದೇವಸ್ಥಾನ,  ಗೋಪುರ ಉದ್ಘಾಟನೆ, ಕಳಸಾರೋಹಣ 

Last Updated 9 ಆಗಸ್ಟ್ 2022, 9:14 IST
ಅಕ್ಷರ ಗಾತ್ರ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದಲ್ಲಿ ನವೀಕರಣಗೊಂಡ ವೀರಭದ್ರೇಶ್ವರ ದೇವಸ್ಥಾನ, ನೂತನವಾಗಿ ನಿರ್ಮಿಸಿದ ಗೋಪುರ ಉದ್ಘಾಟನೆ, ಕಳಸಾರೋಹಣ ಅಂಗವಾಗಿ ಮಂಗಳವಾರ ಪೂರ್ಣಕುಂಭ ಮೆರವಣಿಗೆ ಹಾಗೂ ಪುರವಂತಿಕೆ ನೆರವೇರಿತು.‌

ಈಶಪ್ರಭು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗಣೇಶ ದೇವಸ್ಥಾನದಿಂದ ಆರಂಭವಾದ ಕಳಸದ ಮೆರವಣಿಗೆ ಸಕಲ ವಾದ್ಯಮೇಳದೊಂದಿಗೆ ಇಂಚಲ ಕ್ರಾಸ್ ಮಾರ್ಗವಾಗಿ ದೇವಸ್ಥಾನ ಆವರಣಕ್ಕೆ ಬಂದು ತಲುಪಿತು. ಮಹಿಳೆಯರು ತಲೆ ಮೇಲೆ ಪೂರ್ಣಕುಂಭ ಹೊತ್ತು ಸಾಗಿದರು. ಪುರವಂತರಿಂದ ವೀರಭದ್ರೇಶ್ವರ ಒಡಬುಗಳ ಸೇವೆ ನಡೆಯಿತು. ವೀರಭದ್ರೇಶ್ವರ ಸೇವಾ ಸಮಿತಿ ಸರ್ವ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು.

ದೇವಸ್ಥಾನದಲ್ಲಿ ವೀರಭದ್ರೇಶ್ವರ ಸ್ವಾಮಿ ಪ್ರತಿಮೆಯನ್ನು ವಿವಿಧ ಪುಷ್ಪ ಮಾಲೆಗಳಿಂದ ಆಕರ್ಷಕವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT