ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ವೀರಭದ್ರೇಶ್ವರ ಪ್ರಶಸ್ತಿ

Last Updated 11 ಸೆಪ್ಟೆಂಬರ್ 2021, 13:46 IST
ಅಕ್ಷರ ಗಾತ್ರ

ಬೆಳಗಾವಿ: ‘ವೀರಶೈವ ಲಿಂಗಾಯತ ಸಂಘಟನೆಯು ಸೆ.14ರಂದು ಸಂಜೆ 6ಕ್ಕೆ ಬೆಂಗಳೂರಿನ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಹಮ್ಮಿಕೊಂಡಿರುವ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ‘ವೀರಭದ್ರೇಶ್ವರ ಪ್ರಶಸ್ತಿ’ ಪ್ರದಾನ ಮಾಡಲಾಗುವುದು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

‘ಇದು ಮೊದಲ ಪ್ರಶಸ್ತಿಯಾಗಿದ್ದು, ಶ್ರೀಮಠದಿಂದ ನೀಡಲಾಗುತ್ತಿದೆ. ₹ 50 ಸಾವಿರ ಮೌಲ್ಯದ ವಸ್ತುವನ್ನು ಕಾಣಿಕೆಯಾಗಿ ನೀಡಲಾಗುವುದು. ತಮ್ಮ ಮನೆ ದೇವರು ವೀರಭದ್ರೇಶ್ವರ ಆಗಿರುವುದರಿಂದ ಅವರು ಪ್ರಶಸ್ತಿ ಸ್ವೀಕರಿಸಲು ಒಪ್ಪಿದ್ದಾರೆ. ಮಠ–ಮಾನ್ಯಗಳ ವಿಚಾರದಲ್ಲಿ ಸಹಾಯಕ್ಕೆ ಮುಂಚೂಣಿಯಲ್ಲಿ ಇರುವುದರಿಂದಾಗಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಹೇಳಿದರು.

‘ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ನೇತೃತ್ವದಲ್ಲಿ ಜಯಂತಿ ನಡೆಯಲಿದೆ. ರಂಭಾಪುರಿ ಪೀಠದ ವೀರಸೋಮೇಶ್ದರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವರು. ಒಡೆದು ಹೋಗಿರುವ ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಈ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

‘ವೀರಭದ್ರೇಶ್ವರ ಇಡೀ ವೀರಶೈವ ಲಿಂಗಾಯತ ಸಮುದಾಯದ ಮೂಲ ಪುರುಷನಾಗಿದ್ದಾನೆ. ಅಂದು ಸಮುದಾಯದ ಎಲ್ಲರೂ ಗ್ರಾಮ, ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಸೇರಿದಂತೆ ತಮ್ಮ ವ್ಯಾಪ್ತಿಯಲ್ಲಿ ಜಯಂತಿ ಆಚರಿಸಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT