‘ಇದು ಮೊದಲ ಪ್ರಶಸ್ತಿಯಾಗಿದ್ದು, ಶ್ರೀಮಠದಿಂದ ನೀಡಲಾಗುತ್ತಿದೆ. ₹ 50 ಸಾವಿರ ಮೌಲ್ಯದ ವಸ್ತುವನ್ನು ಕಾಣಿಕೆಯಾಗಿ ನೀಡಲಾಗುವುದು. ತಮ್ಮ ಮನೆ ದೇವರು ವೀರಭದ್ರೇಶ್ವರ ಆಗಿರುವುದರಿಂದ ಅವರು ಪ್ರಶಸ್ತಿ ಸ್ವೀಕರಿಸಲು ಒಪ್ಪಿದ್ದಾರೆ. ಮಠ–ಮಾನ್ಯಗಳ ವಿಚಾರದಲ್ಲಿ ಸಹಾಯಕ್ಕೆ ಮುಂಚೂಣಿಯಲ್ಲಿ ಇರುವುದರಿಂದಾಗಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಹೇಳಿದರು.