<p><strong>ಬೆಳಗಾವಿ</strong>: ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಗುರುವಾರ ನಸುಕಿನ ಜಾವ, ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದು ಆರು ಜನ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ.</p>.<p>ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ.</p>.<p>ಹಣಮವ್ವ ಮೇಗಾಡಿ (25), ಮಾರುತಿ (42), ಇಂದ್ರವ್ವ (24), ದೀಪಾ (31), ಸವಿತಾ (17), ಸುಪ್ರಿತಾ (11) ಮೃತಪಟ್ಟವರು. ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಗುರುವಾರ ನಸುಕಿನ ಜಾವ ಎಲ್ಲರೂ ಗೂಡ್ಸ್ ವಾಹನ ಬಾಡಿಗೆ ಮಾಡಿಕೊಂಡು ಯಲ್ಲಮ್ಮನ ಗುಡ್ಡಕ್ಕೆ ರೇಣುಕಾದೇವಿ ಜಾತ್ರೆಗೆ ತೆರಳುತ್ತಿದ್ದರು.</p>.<p>ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಸಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಃನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತು.<br />ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಐವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇದೇ ಮಾರ್ಗದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಇತರ ವಾಹನಗಳ ಸವಾರರು, ಗ್ರಾಮಸ್ಥರು ಸಹಾಯಕ್ಕೆ ಧಾವಿಸಿದರು. ಸ್ಥಳಕ್ಕೆ ಬಂದ ಕಟಕೋಳ ಪೊಲೀಸರೂ ಆಂಬುಲೆನ್ಸ್ಗಳನ್ನು ಕರೆಯಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದರು.</p>.<p><a href="https://www.prajavani.net/district/ballari/i-am-a-honest-dog-not-a-wolf-says-basavaraj-bommai-1003293.html" itemprop="url">ನಾನು ನಿಯತ್ತಿನ ನಾಯಿ; ತೋಳವಲ್ಲ: ಸಿ.ಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಗುರುವಾರ ನಸುಕಿನ ಜಾವ, ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದು ಆರು ಜನ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ.</p>.<p>ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ.</p>.<p>ಹಣಮವ್ವ ಮೇಗಾಡಿ (25), ಮಾರುತಿ (42), ಇಂದ್ರವ್ವ (24), ದೀಪಾ (31), ಸವಿತಾ (17), ಸುಪ್ರಿತಾ (11) ಮೃತಪಟ್ಟವರು. ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಗುರುವಾರ ನಸುಕಿನ ಜಾವ ಎಲ್ಲರೂ ಗೂಡ್ಸ್ ವಾಹನ ಬಾಡಿಗೆ ಮಾಡಿಕೊಂಡು ಯಲ್ಲಮ್ಮನ ಗುಡ್ಡಕ್ಕೆ ರೇಣುಕಾದೇವಿ ಜಾತ್ರೆಗೆ ತೆರಳುತ್ತಿದ್ದರು.</p>.<p>ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಸಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಃನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತು.<br />ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಐವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇದೇ ಮಾರ್ಗದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಇತರ ವಾಹನಗಳ ಸವಾರರು, ಗ್ರಾಮಸ್ಥರು ಸಹಾಯಕ್ಕೆ ಧಾವಿಸಿದರು. ಸ್ಥಳಕ್ಕೆ ಬಂದ ಕಟಕೋಳ ಪೊಲೀಸರೂ ಆಂಬುಲೆನ್ಸ್ಗಳನ್ನು ಕರೆಯಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದರು.</p>.<p><a href="https://www.prajavani.net/district/ballari/i-am-a-honest-dog-not-a-wolf-says-basavaraj-bommai-1003293.html" itemprop="url">ನಾನು ನಿಯತ್ತಿನ ನಾಯಿ; ತೋಳವಲ್ಲ: ಸಿ.ಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>