<p><strong>ಬೆಳಗಾವಿ: </strong>‘ನಾವು ಯಾರ ವಿರೋಧಿಗಳಲ್ಲ. ನಮ್ಮ ಧರ್ಮದ ಬಗ್ಗೆ ತಿಳಿಯದವರಿಗೆ ತಿಳಿಸುವ ಕೆಲಸವನ್ನು ಸಂಘಟನೆಯಿಂದ ಮಾಡುತ್ತಿದ್ದೇವೆ’ ಎಂದುವಿಶ್ವ ಹಿಂದೂ ಪರಿಷತ್–ಬಜರಂಗ ದಳ ಕರ್ನಾಟಕ ಉತ್ತರ ಪ್ರಾಂತ ಸಂಘಟನಾ ಮಂತ್ರಿ ಮನೋಹರ ಮಠದ ಹೇಳಿದರು.</p>.<p>ಇಲ್ಲಿನ ಮಹಾಂತೇಶ ನಗರದ ಮಹಾಂತ ಭವನದಲ್ಲಿ ವಿಶ್ವ ಹಿಂದೂ ಪರಿಷತ್–ಬಜರಂಗ ದಳದಿಂದ ಈಚೆಗೆ ಆಯೋಜಿಸಿದ್ದ ‘11 ಪ್ರಖಂಡಗಳ 4 ಸಮಿತಿಗಳ ಜವಾಬ್ದಾರಿ ಘೋಷಣಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಂಘಟನೆಯು ಧರ್ಮ ರಕ್ಷಿಸುವ ಕೆಲಸವನ್ನು ಮಾಡುತ್ತಿದೆ. ಹೋರಾಟಗಳ ಮೂಲಕ ದೇಶದಲ್ಲಿ ಅನೇಕ ಬದಲಾವಣೆಗಳನ್ನು ತರಲು ಶ್ರಮಿಸುತ್ತಿದೆ. ನಾವೇನಾದರೂ ಪಡೆದುಕೊಳ್ಳಬೇಕಾದರೆ ಕ್ರಾಂತಿ ಆಗಲೇಬೇಕು. ನಮ್ಮ ಉದ್ದೇಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು’ ಎಂದು ತಿಳಿಸಿದರು.</p>.<p>ನಗರ ಘಟಕದ ಅಧ್ಯಕ್ಷ ಬಸವರಾಜ ಬಾಗೋಜಿ ಮಾತನಾಡಿ, ‘ಸನಾತನ ಧರ್ಮದಲ್ಲಿರುವ ಪೂಜಾ ಕಾರ್ಯಗಳು ವೈಜ್ಞಾನಿಕವಾಗಿವೆ’ ಎಂದು ತಿಳಿಸಿದರು.</p>.<p>‘ದೇಶವನ್ನು ಅಖಂಡ ಮಾಡುವ ಸಂಕಲ್ಪವನ್ನು ನಾವೆಲ್ಲರೂ ಹೊಂದಬೇಕು. ದೇಶವನ್ನು ವಿಶ್ವ ಗುರು ಮಾಡಲು ಹೋರಾಡಬೇಕು’ ಎಂದರು.</p>.<p>ನಗರ ಘಟಕದ ಕಾರ್ಯದರ್ಶಿ ಹೇಮಂತ ಹವಳ, ‘ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೋಡಿಸುತ್ತಾ ಹೋಗುವುದೇ ಸಂಘದ ಉದ್ದೇಶ’ ಎಂದು ತಿಳಿಸಿದರು.</p>.<p>ಪ್ರಾಂತ ಕೋಶಾಧ್ಯಕ್ಷ ಕೃಷ್ಣಭಟ್ ಮಾತನಾಡಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ವಿಜಯ ಜಾಧವ್ ಪ್ರಖಂಡಗಳ ಜವಾಬ್ದಾರಿಗಳನ್ನು ಘೋಷಿಸಿದರು.</p>.<p>ಸಂಯೋಜಕ ಭಾವುಕಣ್ಣ ಲೋಹಾರ, ವಿಭಾಗೀಯ ಸಹ ಕಾರ್ಯದರ್ಶಿ ಅಚ್ಯುತ ಕುಲಕರ್ಣಿ ಇದ್ದರು.</p>.<p>ಆನಂದ ಕರಲಿಂಗಣ್ಣವರ ಸ್ವಾಗತಿಸಿದರು. ಬಸವರಾಜ ಹಳಂಗಳಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ನಾವು ಯಾರ ವಿರೋಧಿಗಳಲ್ಲ. ನಮ್ಮ ಧರ್ಮದ ಬಗ್ಗೆ ತಿಳಿಯದವರಿಗೆ ತಿಳಿಸುವ ಕೆಲಸವನ್ನು ಸಂಘಟನೆಯಿಂದ ಮಾಡುತ್ತಿದ್ದೇವೆ’ ಎಂದುವಿಶ್ವ ಹಿಂದೂ ಪರಿಷತ್–ಬಜರಂಗ ದಳ ಕರ್ನಾಟಕ ಉತ್ತರ ಪ್ರಾಂತ ಸಂಘಟನಾ ಮಂತ್ರಿ ಮನೋಹರ ಮಠದ ಹೇಳಿದರು.</p>.<p>ಇಲ್ಲಿನ ಮಹಾಂತೇಶ ನಗರದ ಮಹಾಂತ ಭವನದಲ್ಲಿ ವಿಶ್ವ ಹಿಂದೂ ಪರಿಷತ್–ಬಜರಂಗ ದಳದಿಂದ ಈಚೆಗೆ ಆಯೋಜಿಸಿದ್ದ ‘11 ಪ್ರಖಂಡಗಳ 4 ಸಮಿತಿಗಳ ಜವಾಬ್ದಾರಿ ಘೋಷಣಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಂಘಟನೆಯು ಧರ್ಮ ರಕ್ಷಿಸುವ ಕೆಲಸವನ್ನು ಮಾಡುತ್ತಿದೆ. ಹೋರಾಟಗಳ ಮೂಲಕ ದೇಶದಲ್ಲಿ ಅನೇಕ ಬದಲಾವಣೆಗಳನ್ನು ತರಲು ಶ್ರಮಿಸುತ್ತಿದೆ. ನಾವೇನಾದರೂ ಪಡೆದುಕೊಳ್ಳಬೇಕಾದರೆ ಕ್ರಾಂತಿ ಆಗಲೇಬೇಕು. ನಮ್ಮ ಉದ್ದೇಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು’ ಎಂದು ತಿಳಿಸಿದರು.</p>.<p>ನಗರ ಘಟಕದ ಅಧ್ಯಕ್ಷ ಬಸವರಾಜ ಬಾಗೋಜಿ ಮಾತನಾಡಿ, ‘ಸನಾತನ ಧರ್ಮದಲ್ಲಿರುವ ಪೂಜಾ ಕಾರ್ಯಗಳು ವೈಜ್ಞಾನಿಕವಾಗಿವೆ’ ಎಂದು ತಿಳಿಸಿದರು.</p>.<p>‘ದೇಶವನ್ನು ಅಖಂಡ ಮಾಡುವ ಸಂಕಲ್ಪವನ್ನು ನಾವೆಲ್ಲರೂ ಹೊಂದಬೇಕು. ದೇಶವನ್ನು ವಿಶ್ವ ಗುರು ಮಾಡಲು ಹೋರಾಡಬೇಕು’ ಎಂದರು.</p>.<p>ನಗರ ಘಟಕದ ಕಾರ್ಯದರ್ಶಿ ಹೇಮಂತ ಹವಳ, ‘ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೋಡಿಸುತ್ತಾ ಹೋಗುವುದೇ ಸಂಘದ ಉದ್ದೇಶ’ ಎಂದು ತಿಳಿಸಿದರು.</p>.<p>ಪ್ರಾಂತ ಕೋಶಾಧ್ಯಕ್ಷ ಕೃಷ್ಣಭಟ್ ಮಾತನಾಡಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ವಿಜಯ ಜಾಧವ್ ಪ್ರಖಂಡಗಳ ಜವಾಬ್ದಾರಿಗಳನ್ನು ಘೋಷಿಸಿದರು.</p>.<p>ಸಂಯೋಜಕ ಭಾವುಕಣ್ಣ ಲೋಹಾರ, ವಿಭಾಗೀಯ ಸಹ ಕಾರ್ಯದರ್ಶಿ ಅಚ್ಯುತ ಕುಲಕರ್ಣಿ ಇದ್ದರು.</p>.<p>ಆನಂದ ಕರಲಿಂಗಣ್ಣವರ ಸ್ವಾಗತಿಸಿದರು. ಬಸವರಾಜ ಹಳಂಗಳಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>