<p><strong>ಬೆಳಗಾವಿ</strong>: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಹಿಂದೂ ವಿರೋಧಿ ಸರ್ಕಾರಗಳು, ಮುಸ್ಲಿಂ ತುಷ್ಟೀಕರಣ ಮಾಡುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂಗಳ ರಕ್ಷಣೆ ಮಾಡುವ ಮತ್ತು ಹಿಂದುತ್ವ ಪ್ರತಿಪಾದಿಸುವ ಪಕ್ಷಗಳನ್ನು ಆಯ್ಕೆ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದಿಲೀಪ ಪರಾಂಡೆ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಮಾಡುತ್ತಿರುವ ಮುಸ್ಲಿಂ ತುಷ್ಟೀಕರಣದಿಂದ ಹಿಂದೂಗಳಿಗೆ ಅಪಾಯವಿದೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂ ಪರವಾದ ಸರ್ಕಾರಗಳು ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕಿದೆ. ಹಿಂದೂಗಳ ಹಿತವೇ ದೇಶದ ಹಿತವಾಗಿದೆ’ ಎಂದರು.<br><br>‘ಈಗ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದಿದೆ. ಆದರೆ, ಇನ್ನೂ ಹಲವು ರಾಜ್ಯಗಳಲ್ಲಿ ಚುನಾವಣೆ ಮತದಾನ ಪ್ರಕ್ರಿಯೆ ನಡೆಯಬೇಕಿದೆ. ಅಂಥ ಕಡೆಗಳಲ್ಲಿ ಹಿಂದೂ ಪರವಾಗಿರುವವರಿಗೆ ಮತ ಹಾಕಬೇಕು. ಹಿಂದೂ ವಿರೋಧಿಗಳು ಸಂಸತ್ತಿಗೆ ಹೋಗಬಾರದು’ ಎಂದು ತಿಳಿಸಿದ ಅವರು, ‘ಇಂದು ಕರ್ನಾಟಕದಲ್ಲಿ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿವೆ. ಗೋವು ರಕ್ಷಣೆ ಮಾಡುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ಹಿಂದೂಗಳು ಯೋಚಿಸಬೇಕು. ಹಿಂದೂ ವಿರೋಧಿಗಳು ಅಧಿಕಾರ ಹಿಡಿದರೆ, ತಮ್ಮ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಮನಗಾಣಬೇಕು’ ಎಂದು ಹೇಳಿದರು.</p>.<p>‘ಎಲ್ಲ ರಾಜ್ಯಗಳಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬರಬೇಕು’ ಎಂದು ಒತ್ತಾಯಿಸಿದ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆ–2019ರ ಕುರಿತು ಕಾಂಗ್ರೆಸ್ನವರು ಸುಳ್ಳು ಹೇಳುತ್ತ, ಮುಸ್ಲಿಮರಿಗೆ ಮೋಸ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>‘ದೇಶದಲ್ಲಿನ ಮಸೀದಿ, ಚರ್ಚ್ಗಳು ಸರ್ಕಾರಿ ವ್ಯವಸ್ಥೆ ಹಿಡಿತದಲ್ಲಿಲ್ಲ. ಅಂತೆಯೇ ದೇವಸ್ಥಾನಗಳನ್ನೂ ಸರ್ಕಾರದ ಸುಪರ್ದಿಯಿಂದ ಹೊರತಂದು, ಅಲ್ಲಿ ಬರುತ್ತಿರುವ ಆದಾಯ ದೇವಾಲಯದ ಅಭಿವೃದ್ಧಿ, ಭಕ್ತರಿಗೆ ಸೌಕರ್ಯ ಕಲ್ಪಿಸಲು ಬಳಕೆಯಾಗಬೇಕು’ ಎಂದರು.</p>.<p>ಮುಖಂಡರಾದ ಶ್ರೀಕಾಂತ ಕದಂ, ಶಿವಕುಮಾರ ಬೋಳಶೆಟ್ಟಿ, ಪ್ರಮೋದಕುಮಾರ ವಕ್ಕುಂದಮಠ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಹಿಂದೂ ವಿರೋಧಿ ಸರ್ಕಾರಗಳು, ಮುಸ್ಲಿಂ ತುಷ್ಟೀಕರಣ ಮಾಡುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂಗಳ ರಕ್ಷಣೆ ಮಾಡುವ ಮತ್ತು ಹಿಂದುತ್ವ ಪ್ರತಿಪಾದಿಸುವ ಪಕ್ಷಗಳನ್ನು ಆಯ್ಕೆ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದಿಲೀಪ ಪರಾಂಡೆ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಮಾಡುತ್ತಿರುವ ಮುಸ್ಲಿಂ ತುಷ್ಟೀಕರಣದಿಂದ ಹಿಂದೂಗಳಿಗೆ ಅಪಾಯವಿದೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂ ಪರವಾದ ಸರ್ಕಾರಗಳು ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕಿದೆ. ಹಿಂದೂಗಳ ಹಿತವೇ ದೇಶದ ಹಿತವಾಗಿದೆ’ ಎಂದರು.<br><br>‘ಈಗ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದಿದೆ. ಆದರೆ, ಇನ್ನೂ ಹಲವು ರಾಜ್ಯಗಳಲ್ಲಿ ಚುನಾವಣೆ ಮತದಾನ ಪ್ರಕ್ರಿಯೆ ನಡೆಯಬೇಕಿದೆ. ಅಂಥ ಕಡೆಗಳಲ್ಲಿ ಹಿಂದೂ ಪರವಾಗಿರುವವರಿಗೆ ಮತ ಹಾಕಬೇಕು. ಹಿಂದೂ ವಿರೋಧಿಗಳು ಸಂಸತ್ತಿಗೆ ಹೋಗಬಾರದು’ ಎಂದು ತಿಳಿಸಿದ ಅವರು, ‘ಇಂದು ಕರ್ನಾಟಕದಲ್ಲಿ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿವೆ. ಗೋವು ರಕ್ಷಣೆ ಮಾಡುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ಹಿಂದೂಗಳು ಯೋಚಿಸಬೇಕು. ಹಿಂದೂ ವಿರೋಧಿಗಳು ಅಧಿಕಾರ ಹಿಡಿದರೆ, ತಮ್ಮ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಮನಗಾಣಬೇಕು’ ಎಂದು ಹೇಳಿದರು.</p>.<p>‘ಎಲ್ಲ ರಾಜ್ಯಗಳಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬರಬೇಕು’ ಎಂದು ಒತ್ತಾಯಿಸಿದ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆ–2019ರ ಕುರಿತು ಕಾಂಗ್ರೆಸ್ನವರು ಸುಳ್ಳು ಹೇಳುತ್ತ, ಮುಸ್ಲಿಮರಿಗೆ ಮೋಸ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>‘ದೇಶದಲ್ಲಿನ ಮಸೀದಿ, ಚರ್ಚ್ಗಳು ಸರ್ಕಾರಿ ವ್ಯವಸ್ಥೆ ಹಿಡಿತದಲ್ಲಿಲ್ಲ. ಅಂತೆಯೇ ದೇವಸ್ಥಾನಗಳನ್ನೂ ಸರ್ಕಾರದ ಸುಪರ್ದಿಯಿಂದ ಹೊರತಂದು, ಅಲ್ಲಿ ಬರುತ್ತಿರುವ ಆದಾಯ ದೇವಾಲಯದ ಅಭಿವೃದ್ಧಿ, ಭಕ್ತರಿಗೆ ಸೌಕರ್ಯ ಕಲ್ಪಿಸಲು ಬಳಕೆಯಾಗಬೇಕು’ ಎಂದರು.</p>.<p>ಮುಖಂಡರಾದ ಶ್ರೀಕಾಂತ ಕದಂ, ಶಿವಕುಮಾರ ಬೋಳಶೆಟ್ಟಿ, ಪ್ರಮೋದಕುಮಾರ ವಕ್ಕುಂದಮಠ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>