<p><strong>ಚಿಕ್ಕೋಡಿ:</strong> ‘ಹಿಂದೂ ಪ್ರಜ್ಞೆ ಕೇವಲ ಧಾರ್ಮಿಕ ವಿಧಿ ವಿಧಾನ ಮಾತ್ರವಲ್ಲ. ಜೀವನದಲ್ಲಿ ಅನುಸರಿಸಿಕೊಂಡು ಹೋಗಬೇಕಾಗಿರುವ ಪದ್ಧತಿಯೇ ಆಗಿದೆ. ನದಿ, ಪರ್ವತ, ಪ್ರಾಣಿ ಸೇರಿದಂತೆ ಪ್ರತಿಯೊಂದರಲ್ಲಿಯೂ ಮನುಷ್ಯ ದೈವತ್ವ ನೋಡುವುದಾಗಿದೆ’ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.</p>.<p>ತಾಲ್ಲೂಕಿನ ಯಡೂರ ಗ್ರಾಮದಲ್ಲಿ ವೀರಭದ್ರೇಶ್ವರ ದೇವಸ್ಥಾನ ಹಾಗೂ ಕಾಡಸಿದ್ದೇಶ್ವರ ಮಠದಿಂದ ಗುರುವಾರ ಹಮ್ಮಿಕೊಂಡಿದ್ದ ರಾಜಗೋಪುರಗಳ ಲೋಕಾರ್ಪಣೆಗೊಳಿಸಿ, ವೀರಶೈವ ಲಿಂಗಾಯತ ಧರ್ಮೋತ್ಥಾನ ಸಮ್ಮೇಳನದಲ್ಲಿ ಮಾತನಾಡಿದರು.</p>.<p>‘ವೀರಶೈವ ಮಠ, ಮಂದಿರ ಕರ್ನಾಟಕದಲ್ಲಿ ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಯತ್ನದಿಂದ ಇದೀಗ ಭಾರತ ಜಗತ್ತಿನಲ್ಲಿಯೇ ಪ್ರಭಾವಶಾಲಿಯಾಗಿದೆ. ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ದೇಶ ಸಾಕಷ್ಟು ಬೆಳೆದಿದೆ. ವಿಕಾಸದ ಕಡೆಗೆ ಭಾರತ ಹೆಜ್ಜೆ ಇಡುತ್ತಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಮಾತನಾಡಿ, ‘ವಸುದೈವ ಕುಟುಂಬ ಎಂಬ ಸಂದೇಶ ಭಾರತ ಜಗತ್ತಿಗೆ ನೀಡಿದೆ. ಅಹಿಂಸೆ, ಕರುಣೆ, ಸತ್ಯ ನಮ್ಮ ತತ್ವಗಳಾಗಿವೆ. ವಿಶ್ವ ಕಲ್ಯಾಣಕ್ಕಾಗಿ ಜಗತ್ತಿನ ಹಲವು ದೇಶಗಳು ಭಾರತದತ್ತ ನೋಡುತ್ತಿವೆ’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅವರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಮಠದಿಂದ ಕೊಡಮಾಡುವ ‘ವಿಕಾಸವೀರ ಪ್ರಶಸ್ತಿ’ ಪ್ರದಾನ ಮಾಡಿದರು.</p>.<p>ಸಾನ್ನಿದ್ಯ ವಹಿಸಿದ್ದ ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ‘ಇರಾನ್, ಇರಾಕ್, ಇಸ್ರೇಲ್, ಅಮೆರಿಕಾ ಮುಂತಾದ ಕಡೆಗೆ ನಡೆಯುತ್ತಿರುವ ಯುದ್ಧ ನಿಲ್ಲಬೇಕು. ಭಾರತ ಈ ಯುದ್ಧ ನಿಲ್ಲಿಸಲು ಪ್ರಯತ್ನಿಸಬೇಕು. ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೊಳಿಸುವುದು ಅವಶ್ಯವಾಗಿದೆ’ ಎಂದರು.</p>.<p>ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ ಸದಲಗಾ ಶಾಸಕ ಗಣೇಶ ಹುಕ್ಕೇರಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ‘ಹಿಂದೂ ಪ್ರಜ್ಞೆ ಕೇವಲ ಧಾರ್ಮಿಕ ವಿಧಿ ವಿಧಾನ ಮಾತ್ರವಲ್ಲ. ಜೀವನದಲ್ಲಿ ಅನುಸರಿಸಿಕೊಂಡು ಹೋಗಬೇಕಾಗಿರುವ ಪದ್ಧತಿಯೇ ಆಗಿದೆ. ನದಿ, ಪರ್ವತ, ಪ್ರಾಣಿ ಸೇರಿದಂತೆ ಪ್ರತಿಯೊಂದರಲ್ಲಿಯೂ ಮನುಷ್ಯ ದೈವತ್ವ ನೋಡುವುದಾಗಿದೆ’ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.</p>.<p>ತಾಲ್ಲೂಕಿನ ಯಡೂರ ಗ್ರಾಮದಲ್ಲಿ ವೀರಭದ್ರೇಶ್ವರ ದೇವಸ್ಥಾನ ಹಾಗೂ ಕಾಡಸಿದ್ದೇಶ್ವರ ಮಠದಿಂದ ಗುರುವಾರ ಹಮ್ಮಿಕೊಂಡಿದ್ದ ರಾಜಗೋಪುರಗಳ ಲೋಕಾರ್ಪಣೆಗೊಳಿಸಿ, ವೀರಶೈವ ಲಿಂಗಾಯತ ಧರ್ಮೋತ್ಥಾನ ಸಮ್ಮೇಳನದಲ್ಲಿ ಮಾತನಾಡಿದರು.</p>.<p>‘ವೀರಶೈವ ಮಠ, ಮಂದಿರ ಕರ್ನಾಟಕದಲ್ಲಿ ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಯತ್ನದಿಂದ ಇದೀಗ ಭಾರತ ಜಗತ್ತಿನಲ್ಲಿಯೇ ಪ್ರಭಾವಶಾಲಿಯಾಗಿದೆ. ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ದೇಶ ಸಾಕಷ್ಟು ಬೆಳೆದಿದೆ. ವಿಕಾಸದ ಕಡೆಗೆ ಭಾರತ ಹೆಜ್ಜೆ ಇಡುತ್ತಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಮಾತನಾಡಿ, ‘ವಸುದೈವ ಕುಟುಂಬ ಎಂಬ ಸಂದೇಶ ಭಾರತ ಜಗತ್ತಿಗೆ ನೀಡಿದೆ. ಅಹಿಂಸೆ, ಕರುಣೆ, ಸತ್ಯ ನಮ್ಮ ತತ್ವಗಳಾಗಿವೆ. ವಿಶ್ವ ಕಲ್ಯಾಣಕ್ಕಾಗಿ ಜಗತ್ತಿನ ಹಲವು ದೇಶಗಳು ಭಾರತದತ್ತ ನೋಡುತ್ತಿವೆ’ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅವರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಮಠದಿಂದ ಕೊಡಮಾಡುವ ‘ವಿಕಾಸವೀರ ಪ್ರಶಸ್ತಿ’ ಪ್ರದಾನ ಮಾಡಿದರು.</p>.<p>ಸಾನ್ನಿದ್ಯ ವಹಿಸಿದ್ದ ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ‘ಇರಾನ್, ಇರಾಕ್, ಇಸ್ರೇಲ್, ಅಮೆರಿಕಾ ಮುಂತಾದ ಕಡೆಗೆ ನಡೆಯುತ್ತಿರುವ ಯುದ್ಧ ನಿಲ್ಲಬೇಕು. ಭಾರತ ಈ ಯುದ್ಧ ನಿಲ್ಲಿಸಲು ಪ್ರಯತ್ನಿಸಬೇಕು. ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೊಳಿಸುವುದು ಅವಶ್ಯವಾಗಿದೆ’ ಎಂದರು.</p>.<p>ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ ಸದಲಗಾ ಶಾಸಕ ಗಣೇಶ ಹುಕ್ಕೇರಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>