ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಡಲಗಾ ಜೈಲಿನಲ್ಲಿ ವಿನಯ

Last Updated 5 ನವೆಂಬರ್ 2020, 16:37 IST
ಅಕ್ಷರ ಗಾತ್ರ

ಬೆಳಗಾವಿ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಗುರುವಾರ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳು ಅವರನ್ನು ಬಿಗಿ ಭದ್ರತೆಯಲ್ಲಿ ರಾತ್ರಿ ಇಲ್ಲಿಗೆ ಕರೆತಂದರು. ಗಾಂಭೀರ್ಯದಿಂದ ಜೈಲಿನೊಳಗೆ ಹೋದ ವಿನಯ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರು.

ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರನ್ನು ಇಲ್ಲಿಂದಲೇ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಸಾಮಾನ್ಯ ಕೋಣೆಯಲ್ಲಿ ಅವರನ್ನು ಇರಿಸಲಾಗಿದೆ. ಕೋವಿಡ್–19 ಕಾರಣದಿಂದಾಗಿ ಯಾರ ಭೇಟಿಗೂ ಅವಕಾಶ ಇರುವುದಿಲ್ಲ’ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT