<p><strong>ಬೆಳಗಾವಿ: </strong>ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.</p>.<p>ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳು ಅವರನ್ನು ಬಿಗಿ ಭದ್ರತೆಯಲ್ಲಿ ಸೋಮವಾರ ಸಂಜೆ ಇಲ್ಲಿಗೆ ಕರೆತಂದರು. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದರಿಂದ, ಅವರನ್ನು ಸಿಬಿಐ ಅಧಿಕಾರಿಗಳು ಕಾರಾಗೃಹಕ್ಕೆ ಸ್ಥಳಾಂತರಿಸಿದರು. ನ್ಯಾಯಾಲಯದ ಆದೇಶ ಪ್ರತಿ ನೀಡಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿದರು.</p>.<p>ಜೈಲಿನೊಳಗೆ ಹೋಗುವ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು.</p>.<p>ಈ ವೇಳೆ, ತಮ್ಮನ್ನು ‘ಅಣ್ಣಾ’ ಎಂದು ಕರೆದ ಬೆಂಬಲಿಗನಿಗೆ ಕೈ ಬೀಸುತ್ತಾ ಸಾಗಿದರು. ವಿನಯ ಅವರ ಬಟ್ಟೆ ಮೊದಲಾದ ಸಾಮಗ್ರಿಗಳಿದ್ದ ಎರಡು ಬ್ಯಾಗ್ಗಳನ್ನು ಸಿಬ್ಬಂದಿಯೊಬ್ಬರು ಒಳಗಡೆಗೆ ಒಯ್ದರು. ಕೆಲವು ಅಭಿಮಾನಿಗಳು ಜೈಲಿನ ಆವರಣಕ್ಕೆ ಬಂದಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.</p>.<p>‘ಸಾಮಾನ್ಯ ಕೋಣೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಕೋವಿಡ್–19 ಕಾರಣದಿಂದಾಗಿ ಯಾರ ಭೇಟಿಗೂ ಅವಕಾಶ ಇರುವುದಿಲ್ಲ’ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.</p>.<p>ಗುರುವಾರ ಅವರನ್ನು ಜೈಲಿಗೆ ತಂದಿರಿಸಿದ್ದ ಸಿಬಿಐ ಅಧಿಕಾರಿಗಳು, ಶನಿವಾರ ಬೆಳಿಗ್ಗೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.</p>.<p>ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳು ಅವರನ್ನು ಬಿಗಿ ಭದ್ರತೆಯಲ್ಲಿ ಸೋಮವಾರ ಸಂಜೆ ಇಲ್ಲಿಗೆ ಕರೆತಂದರು. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದರಿಂದ, ಅವರನ್ನು ಸಿಬಿಐ ಅಧಿಕಾರಿಗಳು ಕಾರಾಗೃಹಕ್ಕೆ ಸ್ಥಳಾಂತರಿಸಿದರು. ನ್ಯಾಯಾಲಯದ ಆದೇಶ ಪ್ರತಿ ನೀಡಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿದರು.</p>.<p>ಜೈಲಿನೊಳಗೆ ಹೋಗುವ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು.</p>.<p>ಈ ವೇಳೆ, ತಮ್ಮನ್ನು ‘ಅಣ್ಣಾ’ ಎಂದು ಕರೆದ ಬೆಂಬಲಿಗನಿಗೆ ಕೈ ಬೀಸುತ್ತಾ ಸಾಗಿದರು. ವಿನಯ ಅವರ ಬಟ್ಟೆ ಮೊದಲಾದ ಸಾಮಗ್ರಿಗಳಿದ್ದ ಎರಡು ಬ್ಯಾಗ್ಗಳನ್ನು ಸಿಬ್ಬಂದಿಯೊಬ್ಬರು ಒಳಗಡೆಗೆ ಒಯ್ದರು. ಕೆಲವು ಅಭಿಮಾನಿಗಳು ಜೈಲಿನ ಆವರಣಕ್ಕೆ ಬಂದಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.</p>.<p>‘ಸಾಮಾನ್ಯ ಕೋಣೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಕೋವಿಡ್–19 ಕಾರಣದಿಂದಾಗಿ ಯಾರ ಭೇಟಿಗೂ ಅವಕಾಶ ಇರುವುದಿಲ್ಲ’ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.</p>.<p>ಗುರುವಾರ ಅವರನ್ನು ಜೈಲಿಗೆ ತಂದಿರಿಸಿದ್ದ ಸಿಬಿಐ ಅಧಿಕಾರಿಗಳು, ಶನಿವಾರ ಬೆಳಿಗ್ಗೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>