ಆರೋಪಿಗಳ ಪರ ವಕಾಲತ್ತು ವಹಿಸಿದ ವಕೀಲರಾದ ಶಾಮಸುಂದರ ಪತ್ತಾರ್, ಮಾರುತಿ ಕಾಮನ್ನಾಚೆ, ಶ್ರೀಧರ ಕುಲಕರ್ಣಿ, ಭೈರು ಠಕ್ಕೇಕರ್ ಅವರು, ‘ವೈಯಕ್ತಿಕ ಕಾರಣದಿಂದ ನಮ್ಮ ಕಕ್ಷಿದಾರರಿಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಸಿಆರ್ಪಿಸಿ 205 ಸೆಕ್ಷನ್ ಪ್ರಕಾರ ವಿಚಾರಣೆಗೆ ಹಾಜರಾಗಲು ಮತ್ತೆ ಕಾಲಾವಕಾಶ ಕೊಡಬೇಕು’ ಎಂದು ಅರ್ಜಿ ಸಲ್ಲಿಸಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ನೀಡಿ ಮುಂದಿನ ವಿಚಾರಣೆ ದಿನಾಂಕ ನಿಗದಿಗೊಳಿಸಿ ಆದೇಶಿಸಿದರು.