ಬಾಗೇಪಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ವಿಧಾನ ಪರಿಷತ್ ಸದಸ್ಯರಾದ ಸಿ.ಆರ್.ಮನೋಹರ್, ಬಿಜೆಪಿ ಅಭ್ಯರ್ಥಿ, ನಟ ಪಿ.ಸಾಯಿಕುಮಾರ್, ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಶಿಡ್ಲಘಟ್ಟ ಕ್ಷೇತ್ರದಲ್ಲಿ ಶಾಸಕ, ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ, ಚಿಂತಾಮಣಿ ಕ್ಷೇತ್ರದಲ್ಲಿ ಭಾರತೀಯ ಪ್ರಜಾ ಪಕ್ಷದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಎಂ.ಸಿ.ಸುಧಾಕರ್ ಸೋಲನ್ನಪ್ಪಿದ್ದಾರೆ.