ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಯಡೂರು ಗ್ರಾಮದ ಕಾಡ ಸಿದ್ಧೇಶ್ವರ ಮಠ ನೀಡುವ ವಿಶ್ವ ಚೇತನ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಹೊಂದಿದೆ.
ಮಾರ್ಚ್ 25ರಂದು ನಡೆಯುವ ವೀರಭದ್ರದೇವ ಕಾಡಸಿದ್ದೇಶ್ವರ ಮಠ ಮತ್ತು ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹಾಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.