ಬೆಳಗಾವಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಪರಿಶೀಲಿಸಿದರು.
ಇಲ್ಲಿನ ರಾಮನಗರ, ಅಶೋಕ ನಗರ ಸೇರಿದಂತೆ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಭಾನುವಾರ ಭೇಟಿ ನೀಡಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
‘ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಇನ್ನೊಂದು ಮತಕ್ಷೇತ್ರಕ್ಕೆ ವರ್ಗಾವಣೆ ಸೇರಿದಂತೆ ಪ್ರತಿಯೊಂದು ಪರಿಷ್ಕರಣೆ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.
‘ನಿಗದಿತ ನಮೂನೆಗಳಲ್ಲಿ ಮಾಹಿತಿ ಪಡೆದು ಪಟ್ಟಿ ಪರಿಷ್ಕರಿಸಬೇಕು. ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ಮನೆ–ಮನೆಗಳಿಗೆ ಭೇಟಿ ನೀಡಿ, ದೋಷರಹಿತ ಪಟ್ಟಿ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.