ನಂತರ ಮಾತನಾಡಿದ ಸಂಸದೆ, ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಅಭಿವೃದ್ಧಿ ಯೋಜನೆಗಳನ್ನು ನೋಡಿ ಜನ ಬೆಂಬಲ ನೀಡಿದ್ದಾರೆ. ಮಹಾನಗರ ಪಾಲಿಕೆ ಮೇಲೆ ಈ ಬಾರಿ ಬಿಜೆಪಿ ಧ್ವಜ ಹಾರಲಿದೆ. 45ಕ್ಕೂ ಹೆಚ್ಚು ಸ್ಥಾನಗಳನ್ನು ನಮ್ಮ ಪಕ್ಷ ಗೆಲ್ಲಲಿದೆ’ ಎಂದರು.