ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | ಮಾ. 7ರಂದು ವಿಟಿಯು ಘಟಿಕೋತ್ಸವ–2: ಬೆಂಗಳೂರಿನ ತನುಗೆ 4 ಚಿನ್ನದ ಪದಕ

Published : 5 ಮಾರ್ಚ್ 2024, 10:58 IST
Last Updated : 5 ಮಾರ್ಚ್ 2024, 10:58 IST
ಫಾಲೋ ಮಾಡಿ
Comments
ಹುಡುಗಿಯರಿಗೆ ಹೆಚ್ಚಿನ ‘ಚಿನ್ನ’
‘ಈ ಬಾರಿ ಘಟಿಕೋತ್ಸವದಲ್ಲಿ ಬೆಂಗಳೂರಿನ ಸಿಎಂಆರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿನಿ ಜಿ.ತನು 4 ಚಿನ್ನದ ಪದಕ ಗಳಿಸಿದ್ದಾರೆ. ಹುಬ್ಬಳ್ಳಿಯ ಕೆಎಲ್‌ಇ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಅಕ್ಷತಾ ನಾಯ್ಕ ಮತ್ತು ದಾವಣಗೆರೆಯ ಯುಬಿಡಿಟಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ನ ಎಂ.ಪೂಜಾ ತಲಾ 3 ಚಿನ್ನದ ಪದಕ, ಬೆಳಗಾವಿಯ ಎಸ್‌.ಜಿ.ಬಾಳೇಕುಂದ್ರಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಕ್ರಾಂತಿ ಮೋರೆ, ಚಿಕ್ಕಮಗಳೂರಿನ ಆದಿಚುಂಚನ ಗಿರಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಎಚ್‌.ಪಿ.ಚೇತನ ಮತ್ತು ದಾವಣಗೆರೆಯ ಯುಬಿಡಿಟಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ನ ಎ.ಎಸ್‌.ನಿತ್ಯಾ ತಲಾ 2 ಚಿನ್ನದ ಪದಕ ಗಳಿಸಿದ್ದಾರೆ’ ಎಂದು ವಿದ್ಯಾಶಂಕರ ಹೇಳಿದರು.
ಮುಂದಿನ ವರ್ಷ 4 ಹೊಸ ಕಾಲೇಜು
‘ಮುಂದಿನ ಶೈಕ್ಷಣಿಕ ವರ್ಷ ಬೆಂಗಳೂರಿನಲ್ಲಿ ಎರಡು, ಮೈಸೂರು ಮತ್ತು ಬೆಳಗಾವಿಯಲ್ಲಿ ತಲಾ ಒಂದು ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಆರಂಭಿಸಲಾಗುವುದು’ ಎಂದು ವಿದ್ಯಾಶಂಕರ ಹೇಳಿದರು. ‘ನಮ್ಮಲ್ಲಿ ಕೌಶಲ ಅಭಿವೃದ್ಧಿ ಕೋರ್ಸ್‌ಗಳಿಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಆದರೆ, ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಡೆಯಲು ಯಾವ ವಿದ್ಯಾರ್ಥಿಯೂ ಆಸಕ್ತಿ ತೋರಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸ್ವಾಯತ್ತ ಕಾಲೇಜುಗಳಲ್ಲಿ ಪರೀಕ್ಷಾ ಅಕ್ರಮಕ್ಕೆ ಹೇಗೆ ಕಡಿವಾಣ ಹಾಕುತ್ತೀರಿ ಎಂಬ ಪ್ರಶ್ನೆಗೆ, ‘ವಿಶ್ವವಿದ್ಯಾಲಯದ ತಂಡ ಅಂಥ ಕಾಲೇಜುಗಳಿಗೆ ಅನಿರೀಕ್ಷಿತವಾಗಿ ಭೇಟಿ ಕೊಟ್ಟು ಪರೀಕ್ಷಾ ವ್ಯವಸ್ಥೆ ಪರಿಶೀಲಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT