<p><strong>ಬೆಳಗಾವಿ:</strong> ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 25ನೇ ವಾರ್ಷಿಕ ಘಟಿಕೋತ್ಸವ (ಭಾಗ–1) ಜುಲೈ 4ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಕೇಂದ್ರ ಸರ್ಕಾರದ ಪ್ರಧಾನ ವೈದ್ಯಕೀಯ ಸಲಹೆಗಾರ ಪ್ರೊ. ಅಜಯ್ಕುಮಾರ್ ಸೂದ್ ಘಟಿಕೋತ್ಸವ ಭಾಷಣ ಮಾಡುವರು. ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಗೌರವ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಹಾಜರಿರುವರು’ ಎಂದು ತಿಳಿಸಿದರು.</p>.<p><strong>60,052 ಪದವಿ ಪ್ರದಾನ:</strong> </p><p>‘ಈ ಸಲದ ಘಟಿಕೋತ್ಸವದಲ್ಲಿ 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಈ ಪೈಕಿ 58,561 ವಿದ್ಯಾರ್ಥಿಗಳಿಗೆ (ಸ್ವಾಯತ್ತ ಮಹಾವಿದ್ಯಾಲಯದ 20,707 ವಿದ್ಯಾರ್ಥಿಗಳು) ಬಿ.ಇ, 117 ವಿದ್ಯಾರ್ಥಿಗಳಿಗೆ ಬಿ.ಟೆಕ್, 10 ವಿದ್ಯಾರ್ಥಿಗಳಿಗೆ ಬಿ.ಪ್ಲ್ಯಾನ್, 1,040 ವಿದ್ಯಾರ್ಥಿಗಳಿಗೆ (ಸ್ವಾಯತ್ತ ಮಹಾವಿದ್ಯಾಲಯದ 234 ವಿದ್ಯಾರ್ಥಿಗಳು) ಬಿ.ಆರ್ಕ್, 24 ವಿದ್ಯಾರ್ಥಿಗಳಿಗೆ ಬಿ.ಎಸ್ಸಿ (ಆನರ್ಸ್) ಪದವಿ ಪ್ರದಾನ ಮಾಡಲಾಗುವುದು. 262 ಪಿಎಚ್.ಡಿ ಮತ್ತು ಎರಡು ಇಂಟಿಗ್ರೇಟೇಡ್ ಡ್ಯುಯಲ್ ಡಿಗ್ರಿ ನೀಡಲಾಗುವುದು’ ಎಂದರು.</p>.<p><strong>ನಮ್ರತಾಗೆ 13 ಚಿನ್ನದ ಪದಕ:</strong> </p><p>ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್ನ ಸಿವಿಲ್ ವಿಭಾಗದ ನಮ್ರತಾ ಸಿ. ಪ್ರಭು ಅವರು 13 ಚಿನ್ನದ ಪದಕ ಗಳಿಸಿದ್ದಾರೆ. </p>.<p>ಬೆಂಗಳೂರಿನ ಆರ್.ವಿ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ನವ್ಯಶ್ರೀ ಗಣಪಿಶೆಟ್ಟಿ 11, ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. 7 ಮತ್ತು ಮೈಸೂರಿನ ಜಿಎಸ್ಎಸ್ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಫಾರ್ ವುಮೆನ್ನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಕವನಾ ಎ. ತಲಾ 7, ಬೆಂಗಳೂರಿನ ದಯಾನಂದ ಸಾಗರ ಅಕಾಡೆಮಿ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಮೋಹಿನಿ ವಿ. 6 ಪದಕ ಪಡೆದಿದ್ದಾರೆ.</p>.<p>ಬೆಂಗಳೂರಿನ ಆರ್ಎನ್ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟ್ರುಮೆಂಟೇಷನ್ ವಿಭಾಗದ ಜಾಹ್ನವಿ ಕೆ. ಮತ್ತು ಮೂಡಬಿದರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ನ ಇನ್ಫಾರ್ಮೇಷನ್ ಸೈನ್ಸ್ ವಿಭಾಗದ ಮೇದಿನಿ ಎಸ್. ರಾವ್ ತಲಾ 4 ಹಾಗೂ ಬೆಂಗಳೂರಿನ ಈಸ್ಟ್ ವೆಸ್ಟ್ ಕಾಲೇಜ್ ಆಫ್ ಎಂಜಿನಿಯರಿಂಗ್ನ ಏರೋನಾಟಿಕಲ್ ವಿಭಾಗದ ರಕ್ಷಿತಾ ಎಂ. 2 ಪದಕ ಗಳಿಸಿದ್ದಾರೆ.</p>.<p>ಕುಲಸಚಿವ ಪ್ರೊ. ಬಿ.ಇ. ರಂಗಸ್ವಾಮಿ, ಮೌಲ್ಯಮಾಪನ ಕುಲಸಚಿವ ಪ್ರೊ. ಟಿ.ಎನ್. ಶ್ರೀನಿವಾಸ ಇದ್ದರು. </p>.<blockquote>ಒಟ್ಟು 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಪಠ್ಯಕ್ರಮ ಬೋಧನೆಗೆ ತರಬೇತಿ ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ಕ್ರಮ</blockquote>.<div><blockquote>ಗೋಕಾಕ ನಗರದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಘಟಕ ಮಹಾವಿದ್ಯಾಲಯ ಸ್ಥಾಪಿಸಲು ವಿಶ್ವವಿದ್ಯಾಲಯವು ಯೋಜನೆ ರೂಪಿಸಿದೆ</blockquote><span class="attribution">ಪ್ರೊ. ಎಸ್. ವಿದ್ಯಾಶಂಕರ್ ಕುಲಪತಿ ವಿಟಿಯು</span></div>.<p><strong>‘ಪಠ್ಯಕ್ರಮ ಬದಲಾವಣೆ’</strong> </p><p>‘2025–26ನೇ ಸಾಲಿನಿಂದಲೇ ಸ್ನಾತಕ ಕೋರ್ಸ್ಗಳ ಪಠ್ಯಕ್ರಮ ಬದಲಿಸಿದ್ದೇವೆ. ಪ್ರಸ್ತುತ ದಿನಗಳಲ್ಲಿ ಕೈಗಾರಿಕೆಗಳು ಬಯಸುವ ಕೌಶಲಾಧರಿತ ಈ ಪಠ್ಯಕ್ರಮ ದೇಶದಲ್ಲೇ ಮಾದರಿಯಾಗಿದೆ. ಕೈಗಾರಿಕೋದ್ಯಮಿಗಳು ಸೇರಿ ವಿವಿಧ ರಂಗದವರ ಜತೆಗೆ ಚರ್ಚಿಸಿ ಇದನ್ನು ರೂಪಿಸಿದ್ದೇವೆ. ಇದನ್ನು ಬೋಧಿಸುವವರಿಗೂ ತರಬೇತಿ ಕಾರ್ಯಕ್ರಮ ನಡೆಸುತ್ತಿದ್ದೇವೆ’ ಎಂದು ಎಸ್. ವಿದ್ಯಾಶಂಕರ ಹೇಳಿದರು. ‘ಸಂಶೋಧನೆ ಮತ್ತು ನಾವೀನ್ಯತೆಗೆ ಒತ್ತು ನೀಡಲಾಗುತ್ತಿದ್ದು ಹೊಸ ಬೋಧನಾ ಆಯಾಮಗಳ ಬಗ್ಗೆ ಚಿಂತನೆ ನಡೆಸಿದ್ದೇವೆ. ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಔದ್ಯೋಗಿಕ ರಂಗದ ದಿಗ್ಗಜರೊಂದಿಗೆ ಇಂಟರ್ನ್ಶಿಪ್ ತರಬೇತಿ ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿ ವಿನಿಯಮದಂಥ ಯೋಜನೆ ಹಾಕಿಕೊಂಡಿದ್ದೇವೆ’ ಎಂದರು. ‘ಅಂತರರಾಷ್ಟ್ರೀಯ ಶೈಕ್ಷಣಿಕ ವೇಳಾಪಟ್ಟಿ ಮಾದರಿಯಲ್ಲೇ ನಮ್ಮ ವೇಳಾಪಟ್ಟಿ ರೂಪಿಸಿದ್ದೇವೆ. ತ್ವರಿತವಾಗಿ ಫಲಿತಾಂಶ ಪ್ರಕಟಿಸಿ ಉನ್ನತ ಶಿಕ್ಷಣಕ್ಕಾಗಿ ವಿದೇಶ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತೇವೆ’ ಎಂದು ತಿಳಿಸಿದರು. ‘ಪ್ರತಿ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದವರಿಗಾಗಿ ಪ್ರತ್ಯೇಕವಾಗಿ ಎರಡು ಘಟಿಕೋತ್ಸವ ನಡೆಸುತ್ತಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 25ನೇ ವಾರ್ಷಿಕ ಘಟಿಕೋತ್ಸವ (ಭಾಗ–1) ಜುಲೈ 4ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಕೇಂದ್ರ ಸರ್ಕಾರದ ಪ್ರಧಾನ ವೈದ್ಯಕೀಯ ಸಲಹೆಗಾರ ಪ್ರೊ. ಅಜಯ್ಕುಮಾರ್ ಸೂದ್ ಘಟಿಕೋತ್ಸವ ಭಾಷಣ ಮಾಡುವರು. ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಗೌರವ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಹಾಜರಿರುವರು’ ಎಂದು ತಿಳಿಸಿದರು.</p>.<p><strong>60,052 ಪದವಿ ಪ್ರದಾನ:</strong> </p><p>‘ಈ ಸಲದ ಘಟಿಕೋತ್ಸವದಲ್ಲಿ 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಈ ಪೈಕಿ 58,561 ವಿದ್ಯಾರ್ಥಿಗಳಿಗೆ (ಸ್ವಾಯತ್ತ ಮಹಾವಿದ್ಯಾಲಯದ 20,707 ವಿದ್ಯಾರ್ಥಿಗಳು) ಬಿ.ಇ, 117 ವಿದ್ಯಾರ್ಥಿಗಳಿಗೆ ಬಿ.ಟೆಕ್, 10 ವಿದ್ಯಾರ್ಥಿಗಳಿಗೆ ಬಿ.ಪ್ಲ್ಯಾನ್, 1,040 ವಿದ್ಯಾರ್ಥಿಗಳಿಗೆ (ಸ್ವಾಯತ್ತ ಮಹಾವಿದ್ಯಾಲಯದ 234 ವಿದ್ಯಾರ್ಥಿಗಳು) ಬಿ.ಆರ್ಕ್, 24 ವಿದ್ಯಾರ್ಥಿಗಳಿಗೆ ಬಿ.ಎಸ್ಸಿ (ಆನರ್ಸ್) ಪದವಿ ಪ್ರದಾನ ಮಾಡಲಾಗುವುದು. 262 ಪಿಎಚ್.ಡಿ ಮತ್ತು ಎರಡು ಇಂಟಿಗ್ರೇಟೇಡ್ ಡ್ಯುಯಲ್ ಡಿಗ್ರಿ ನೀಡಲಾಗುವುದು’ ಎಂದರು.</p>.<p><strong>ನಮ್ರತಾಗೆ 13 ಚಿನ್ನದ ಪದಕ:</strong> </p><p>ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್ನ ಸಿವಿಲ್ ವಿಭಾಗದ ನಮ್ರತಾ ಸಿ. ಪ್ರಭು ಅವರು 13 ಚಿನ್ನದ ಪದಕ ಗಳಿಸಿದ್ದಾರೆ. </p>.<p>ಬೆಂಗಳೂರಿನ ಆರ್.ವಿ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ನವ್ಯಶ್ರೀ ಗಣಪಿಶೆಟ್ಟಿ 11, ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. 7 ಮತ್ತು ಮೈಸೂರಿನ ಜಿಎಸ್ಎಸ್ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಫಾರ್ ವುಮೆನ್ನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಕವನಾ ಎ. ತಲಾ 7, ಬೆಂಗಳೂರಿನ ದಯಾನಂದ ಸಾಗರ ಅಕಾಡೆಮಿ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಮೋಹಿನಿ ವಿ. 6 ಪದಕ ಪಡೆದಿದ್ದಾರೆ.</p>.<p>ಬೆಂಗಳೂರಿನ ಆರ್ಎನ್ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟ್ರುಮೆಂಟೇಷನ್ ವಿಭಾಗದ ಜಾಹ್ನವಿ ಕೆ. ಮತ್ತು ಮೂಡಬಿದರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ನ ಇನ್ಫಾರ್ಮೇಷನ್ ಸೈನ್ಸ್ ವಿಭಾಗದ ಮೇದಿನಿ ಎಸ್. ರಾವ್ ತಲಾ 4 ಹಾಗೂ ಬೆಂಗಳೂರಿನ ಈಸ್ಟ್ ವೆಸ್ಟ್ ಕಾಲೇಜ್ ಆಫ್ ಎಂಜಿನಿಯರಿಂಗ್ನ ಏರೋನಾಟಿಕಲ್ ವಿಭಾಗದ ರಕ್ಷಿತಾ ಎಂ. 2 ಪದಕ ಗಳಿಸಿದ್ದಾರೆ.</p>.<p>ಕುಲಸಚಿವ ಪ್ರೊ. ಬಿ.ಇ. ರಂಗಸ್ವಾಮಿ, ಮೌಲ್ಯಮಾಪನ ಕುಲಸಚಿವ ಪ್ರೊ. ಟಿ.ಎನ್. ಶ್ರೀನಿವಾಸ ಇದ್ದರು. </p>.<blockquote>ಒಟ್ಟು 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಪಠ್ಯಕ್ರಮ ಬೋಧನೆಗೆ ತರಬೇತಿ ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ಕ್ರಮ</blockquote>.<div><blockquote>ಗೋಕಾಕ ನಗರದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಘಟಕ ಮಹಾವಿದ್ಯಾಲಯ ಸ್ಥಾಪಿಸಲು ವಿಶ್ವವಿದ್ಯಾಲಯವು ಯೋಜನೆ ರೂಪಿಸಿದೆ</blockquote><span class="attribution">ಪ್ರೊ. ಎಸ್. ವಿದ್ಯಾಶಂಕರ್ ಕುಲಪತಿ ವಿಟಿಯು</span></div>.<p><strong>‘ಪಠ್ಯಕ್ರಮ ಬದಲಾವಣೆ’</strong> </p><p>‘2025–26ನೇ ಸಾಲಿನಿಂದಲೇ ಸ್ನಾತಕ ಕೋರ್ಸ್ಗಳ ಪಠ್ಯಕ್ರಮ ಬದಲಿಸಿದ್ದೇವೆ. ಪ್ರಸ್ತುತ ದಿನಗಳಲ್ಲಿ ಕೈಗಾರಿಕೆಗಳು ಬಯಸುವ ಕೌಶಲಾಧರಿತ ಈ ಪಠ್ಯಕ್ರಮ ದೇಶದಲ್ಲೇ ಮಾದರಿಯಾಗಿದೆ. ಕೈಗಾರಿಕೋದ್ಯಮಿಗಳು ಸೇರಿ ವಿವಿಧ ರಂಗದವರ ಜತೆಗೆ ಚರ್ಚಿಸಿ ಇದನ್ನು ರೂಪಿಸಿದ್ದೇವೆ. ಇದನ್ನು ಬೋಧಿಸುವವರಿಗೂ ತರಬೇತಿ ಕಾರ್ಯಕ್ರಮ ನಡೆಸುತ್ತಿದ್ದೇವೆ’ ಎಂದು ಎಸ್. ವಿದ್ಯಾಶಂಕರ ಹೇಳಿದರು. ‘ಸಂಶೋಧನೆ ಮತ್ತು ನಾವೀನ್ಯತೆಗೆ ಒತ್ತು ನೀಡಲಾಗುತ್ತಿದ್ದು ಹೊಸ ಬೋಧನಾ ಆಯಾಮಗಳ ಬಗ್ಗೆ ಚಿಂತನೆ ನಡೆಸಿದ್ದೇವೆ. ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಔದ್ಯೋಗಿಕ ರಂಗದ ದಿಗ್ಗಜರೊಂದಿಗೆ ಇಂಟರ್ನ್ಶಿಪ್ ತರಬೇತಿ ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿ ವಿನಿಯಮದಂಥ ಯೋಜನೆ ಹಾಕಿಕೊಂಡಿದ್ದೇವೆ’ ಎಂದರು. ‘ಅಂತರರಾಷ್ಟ್ರೀಯ ಶೈಕ್ಷಣಿಕ ವೇಳಾಪಟ್ಟಿ ಮಾದರಿಯಲ್ಲೇ ನಮ್ಮ ವೇಳಾಪಟ್ಟಿ ರೂಪಿಸಿದ್ದೇವೆ. ತ್ವರಿತವಾಗಿ ಫಲಿತಾಂಶ ಪ್ರಕಟಿಸಿ ಉನ್ನತ ಶಿಕ್ಷಣಕ್ಕಾಗಿ ವಿದೇಶ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತೇವೆ’ ಎಂದು ತಿಳಿಸಿದರು. ‘ಪ್ರತಿ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದವರಿಗಾಗಿ ಪ್ರತ್ಯೇಕವಾಗಿ ಎರಡು ಘಟಿಕೋತ್ಸವ ನಡೆಸುತ್ತಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>